Webdunia - Bharat's app for daily news and videos

Install App

ಕಕನಕಪುರದ ಶೇ. 66.67 ಮತದಾನ 73.29ಕ್ಕೆ ಜಂಪ್ ಆಗಿದ್ದು ಹೇಗೆ?

Webdunia
ಶುಕ್ರವಾರ, 23 ಆಗಸ್ಟ್ 2013 (19:28 IST)
PR
PR
ಕನಕಪುರ: ಕನಕಪುರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮತಎಣಿಕೆಯಲ್ಲಿ ಯಾವುದೇ ಗೊಂದಲವಿಲ್ಲ, ಮತದಾರರ ಸಂಖ್ಯೆ ಸರಿಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿಯಾಗಿದ್ದ ರಾಮನಗರ ಡಿಸಿ ಶ್ರೀರಾಮರೆಡ್ಡಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಕನಕಪುರ ಕ್ಷೇತ್ರದಲ್ಲಿ ಮೊದಲಿಗೆ 66.67 ಮತದಾನವಾಗಿದೆ ಎಂದು ಹೇಳಿಕೆ ನೀಡಿದ ನಂತರ ಹೇಳಿಕೆ ಬದಲಾಯಿಸಿ ಶೇ. 73. 29ರಷ್ಟು ಮತದಾನವಾಗಿದೆ ಎಂದು ಹೇಳಿಕೆ ನೀಡಲಾಯಿತು. ಈ ಕುರಿತು ಚುನಾವಣೆ ಆಯೋಗಕ್ಕೆ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ದೂರು ನೀಡಿದ ಹಿನ್ನೆಲೆಯಲ್ಲಿ ಶ್ರೀರಾಮರೆಡ್ಡಿ ಮೇಲಿನ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಅನಿತಾ ಕುಮಾರಸ್ವಾಮಿಯವರನ್ನು ಮಾಧ್ಯಮ ಪ್ರಶ್ನಿಸಿದಾಗ, ಬೇರೆ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಆ ರೀತಿ ಹೇಳಿಕೆ ನೀಡದೇ ಕನಕಪುರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಶೇ. 66.67 ಮತದಾನವಾಗಿದೆ ಅಂತೇಳಿ ನಂತ್ರ ಶೇ. 73.29 ಎಂದು ಬದಲಾಯಿಸಿದ್ದಾರೆ. ಆದ್ದರಿಂದ ಈ ಕುರಿತು ತಾವು ಪ್ರಶ್ನಿಸಿದ್ದಾಗಿ ಅನಿತಾ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments