Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವಕ್ಕೆ ಕಲಾವಿದರ ಗೈರು: ಅಂಬಿ ಕಿಡಿ

Webdunia
ಸೋಮವಾರ, 14 ಡಿಸೆಂಬರ್ 2009 (14:50 IST)
NRB
ಕರ್ನಾಟಕ ಕಲಾವಿದರ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಿತ್ರ ಕಲಾವಿದರೇ ಗೈರು ಹಾಜರಾದಬಗ್ಗೆ ಹಿರಿಯ ನಟ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದ ಜೆ.ಪಿ ನಗರದಲ್ಲಿ ಕಲಾವಿದರ ಸಂಘ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಸಮಾರಂಭಕ್ಕೆ ಆಗಮಿಸುವಂತೆ ಕನ್ನಡದ ಮೇರು ನಟರಾದ ವಿಷ್ಣುವರ್ಧನ್, ಶಿವರಾಜ್ ಕುಮಾರ್, ರವಿಚಂದ್ರನ್, ಸುದೀಪ್, ದರ್ಶನ್ ಸೇರಿದಂತೆ ಪ್ರತಿಯೊಬ್ಬ ಕಲಾವಿದರಿಗೂ ಆಹ್ವಾನ ಕಳುಹಿಸಲಾಗಿತ್ತು.

ಆದರೆ, ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷರಾಗಿರುವ ಅಂಬರೀಶ್ ಬಿಟ್ಟರೆ ಉಳಿದ ಯಾವ ಕಲಾವಿದರೂ ಆಗಮಿಸಿರಲಿಲ್ಲ.ಇಂತಹ ಕಾರ್ಯಕ್ರಮಗಳಿಗೆ ಕಲಾವಿದರೇ ಆಗಮಿಸದಿದ್ದರೆ ಇನ್ನಾರಿಗಾಗಿ ಇಂತಹ ಸಮಾರಂಭ ಮಾಡಬೇಕು. ನಿರೀಕ್ಷೆಯಂತೆ ಗಣ್ಯರು, ಆಹ್ವಾನಿತರು ಬರದೇ ಇದ್ದರೆ ಇಂತಹ ಕಾರ್ಯಕ್ರಮಗಳನ್ನು ಮಾಡುವುದೇ ಬೇಡ ಎಂದು ಅಂಬರೀಶ್ ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ ಒಂದರಂದೇ ಆಯೋಜಿಸಲಾಗಿತ್ತು. ಆದರೆ, ಅಂದು ಡಾ.ರಾಜ್ ಅವರ ಅಂಚೆ ಚೀಟಿ ಬಿಡುಗಡೆ ಸಮಾರಂಭ ಇದ್ದುದರಿಂದ ಡಿಸೆಂಬರ್ 13ಕ್ಕೆ ಮುಂದೂಡಲಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments