Webdunia - Bharat's app for daily news and videos

Install App

ಕಲುಷಿತ ನೀರು: ಮಹಿಳೆ ಸಾವು, ಹಲವರು ಆಸ್ಪತ್ರೆಗೆ

ಕ್ರಮ ಕೈಗೊಳ್ಳದ ಜಲಮಂಡಳಿ ವಿರುದ್ಧ ಸಾರ್ವಜನಿಕರ ಆಕ್ರೋಶ

Webdunia
ಸೋಮವಾರ, 28 ಜನವರಿ 2008 (10:39 IST)
ಕಲುಷಿತ ನೀರು ಕುಡಿದ ಪರಿಣಾಮವಾಗಿ ಭಾರತೀನಗರದ ಮಹಿಳೆಯೊಬ್ಬಳು ಮೃತಪಟ್ಟಿದ್ದು, ಇದರಿಂದ ಜಲಮಂಡಳಿಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲುಷಿತ ನೀರು ಕುಡಿದು ರೇಖಾ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಅಲ್ಲದೆ, ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಸುಮಾರು 150ಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, 6 ಮಕ್ಕಳ ಪರಿಸ್ಥಿತಿ ಗಂಭೀರ ಸ್ವರೂಪ ತಾಳಿದೆ.

ಜಲಮಂಡಳಿಯು ಕಳೆದ 20 ದಿನಗಳಿಂದಲೂ ಕಲುಷಿತ ನೀರು ಬಿಡುಗಡೆ ಮಾಡುತ್ತಿದ್ದು, ಈ ಬಗ್ಗೆ ನಿವಾಸಿಗಳು ಮನವಿಯನ್ನು ಸಲ್ಲಿಸಿದರೂ ಸ್ಪಂದಿಸಿರಲಿಲ್ಲ. ಈಗ ಮಹಿಳೆ ಸಾವು ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳೀಯರು ಜಲಮಂಡಳಿಯ ಕಚೇರಿ ಮುಂದೆ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಜಲಮಂಡಳಿಯು ಪೂರೈಸುತ್ತಿರುವ ನೀರಿನ ಪೈಪಿನಲ್ಲಿ ಒಳಚರಂಡಿಯ ನೀರು ಮಿಶ್ರಣವಾಗುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಪಾಲಿಕೆಯು ಸೂಕ್ತ ನಿರ್ಧಾರವನ್ನು ತಾಳದ ಪರಿಣಾಮ ಈ ಸಾವು ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments