Webdunia - Bharat's app for daily news and videos

Install App

ಕಾಂಗ್ರೆಸ್‌ನಂತ ಕೆಟ್ಟ ಸರ್ಕಾರವನ್ನು ತೆಗೆಯಲು ಒಂದಾಗಿದ್ದೇವೆ: ಜೋಷಿ

Webdunia
ಗುರುವಾರ, 9 ಜನವರಿ 2014 (12:39 IST)
PR
PR
ಬೆಂಗಳೂರು: ಕಾಂಗ್ರೆಸ್‌ನಂತ ಕೆಟ್ಟ ಸರ್ಕಾರವನ್ನು ತೆಗೆಯಲು ನಾವೆಲ್ಲರೂ ಒಂದಾಗಬೇಕೆಂಬ ತೀರ್ಮಾನದೊಂದಿಗೆ ಯಡಿಯೂರಪ್ಪನವರನ್ನು ಮತ್ತೆ ಬಿಜೆಪಿಗೆ ಸೇರ್ಪಡೆ ಮಾಡುತ್ತಿದ್ದೇವೆ. ಈ ಸದಸ್ಯತ್ವವನ್ನು ಸ್ವೀಕರಿಸಿದ ಯಡಿಯೂರಪ್ಪನವರಿಗೆ ಅತ್ಯಂತ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ಹೇಳಿದರು. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಷಿ ಇವತ್ತು ಕರ್ನಾಟಕದಲ್ಲಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ.

ಏನೋ ನಮ್ಮ ಶಕ್ತಿಯಿಂದಲೇ ಬಂದಿದ್ದೇವೆ. ಬಿಜೆಪಿಯನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎನ್ನುವಂತೆ ಮಾತಾಡ್ತಾರೆ. ನರೇಂದ್ರ ಮೋದಿಯವರನ್ನು ಅತ್ಯಂತ ಕೆಟ್ಟ ಭಾಷೆಯಲ್ಲಿ ಟೀಕಿಸುತ್ತಿದ್ದಾರೆ. ಇದಕ್ಕೆಲ್ಲ ತಕ್ಕ ಉತ್ತರವನ್ನು ನೀಡಬೇಕಾಗಿದೆ. ಪುಣ್ಯಾತ್ಮರಾದ ಅಟಲ್ ಬಿಹಾರಿ ವಾಜಪೇಯ ಮಾಡಿದ ಯೋಜನೆಗಳು ಇವತ್ತು ಕರ್ನಾಟಕದಲ್ಲಿ ಜಾರಿಯಾಗಿಲ್ಲ. ಒಂದು ಕಾಲದಲ್ಲಿ ಯಡಿಯೂರಪ್ಪ, ಅನಂತಕುಮಾರ್, ಜಗದೀಶ್ ಶೆಟ್ಟರ್, ಸದಾನಂದ ಗೌಡ ಈ ಪಕ್ಷವನ್ನು ಚೆನ್ನಾಗಿ ಬೆಳೆಸಿದ್ದಾರೆ. ನಗರಪ್ರದೇಶಕ್ಕೆ ಸೀಮಿತವಾದ ಪಕ್ಷವನ್ನು ಹಳ್ಳಿಗಳಿಗೆ ಒಯ್ದವರು ಯಡಿಯೂರಪ್ಪ ಎಂದು ಗುಣಗಾನ ಮಾಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments