Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಧಿಕಾರಕ್ಕೇರುವಲ್ಲಿ ಜಿ ಪರಮೇಶ್ವರ್‌ ಕೊಡುಗೆ ಅಪಾರ: ಬೆಂಬಲಿಗರು

ಕಾಂಗ್ರೆಸ್ ಅಧಿಕಾರಕ್ಕೇರುವಲ್ಲಿ ಜಿ ಪರಮೇಶ್ವರ್‌ ಕೊಡುಗೆ ಅಪಾರ: ಬೆಂಬಲಿಗರು
ಬೆಂಗಳೂರು , ಗುರುವಾರ, 31 ಅಕ್ಟೋಬರ್ 2013 (14:02 IST)
PTI
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಹಿಂದೆ ಅವರ ಕೊಡುಗೆ ಹಾಗೂ ಪರಿಶ್ರಮ ಸಾಕಷ್ಟಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಅವರ ಬೆಂಬಲಿಗರು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಡಾ.ಜಿ.ಪರಮೇಶ್ವರ ಅವರಿಗೆ ನ್ಯಾಯಸಮ್ಮತವಾಗಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಸಚಿವರಾದ ಕೆ.ಜೆ.ಜಾರ್ಜ್, ಎಸ್.ಆರ್.ಪಾಟೀಲ್, ಹಿರಿಯ ನಟಿಯರಾದ ಜಯಂತಿ, ಜಯಮಾಲ, ವಿಧಾನ ಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಶುಭ ಹಾರೈಸಿದರು. ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳು ಶುಭ ಕೋರಿದರು. ಇದೇ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರಿಗೆ ಡಾ.ಜಿ.ಪರಮೇಶ್ವರ ಪಾದಪೂಜೆ ನೆರವೇರಿಸಿದರು.

Share this Story:

Follow Webdunia kannada