Select Your Language

Notifications

webdunia
webdunia
webdunia
webdunia

ಕಾಂಗ್ರೆಸ್, ಬಿಜೆಪಿಗೆ ಮತದಾರರು ಏಕೆ ಮತ ನೀಡಬೇಕು: ಕುಮಾರಸ್ವಾಮಿ ಪ್ರಶ್ನೆ

ಕಾಂಗ್ರೆಸ್, ಬಿಜೆಪಿಗೆ ಮತದಾರರು ಏಕೆ ಮತ ನೀಡಬೇಕು: ಕುಮಾರಸ್ವಾಮಿ ಪ್ರಶ್ನೆ
, ಮಂಗಳವಾರ, 8 ಏಪ್ರಿಲ್ 2014 (11:42 IST)
PR
PR
ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿಗೆ ರಾಜ್ಯದ ಮತದಾರರು ಯಾಕೆ ಮತ ನೀಡಬೇಕು ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಚುನಾವಣೆ ಪ್ರಚಾರದಲ್ಲಿ ಮಾತನಾಡುತ್ತಾ ಪ್ರಶ್ನಿಸಿದರು. ನರೇಂದ್ರ ಮೋದಿ ರಾಜ್ಯದ ಸಮಸ್ಯೆಗಳ ಬಗ್ಗೆ ಏನಾದರೂ ಮಾತನಾಡಿದ್ದಾರೆಯೇ? ಯಾವ ಕಾರಣಕ್ಕಾಗಿ ಅವರಿಗೆ ಓಟು ನೀಡಬೇಕು ಎಂದು ಕುಮಾರಸ್ವಾಮಿ ಕೇಳಿದರು. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಅವರೇನಾದರೂ ಮಾತನಾಡಿದ್ದಾರೆಯೇ, ರಾಜ್ಯದಲ್ಲಿ ಅನೇಕ ಸಮಸ್ಯೆಗಳು ಕಾಡುತ್ತಿವೆ. ಇವುಗಳ ನಿವಾರಣೆ ಬಗ್ಗೆ ಬಿಜೆಪಿ ಏನಾದರೂ ಹೇಳಿದೆಯೇ ಎಂದು ಅವರು ಪ್ರಶ್ನಿಸಿದರು.

ರಾಹುಲ್ ಗಾಂಧಿ ಐದು ವರ್ಷದ ಬಿಜೆಪಿ ಸರ್ಕಾರದಲ್ಲಿ ಹಲವಾರು ರೀತಿಯಲ್ಲಿ ಶಾಸಕರು, ಮಂತ್ರಿಗಳು ಕೆಲವು ಪ್ರಕರಣಗಳಲ್ಲಿ ಭಾಗಿಯಾದ ವಿಷಯದ ಬಗ್ಗೆ ದೊಡ್ಡ ದೊಡ್ಡ ಭಾಷಣ ಮಾಡುತ್ತಿದ್ದಾರೆ. ಆದರೆ ಅವರು ಕೂಡ ರಾಜ್ಯದ ಅಭಿವೃದ್ಧಿ ಬಗ್ಗೆ ಏನು ಮಾತನಾಡಿದ್ದಾರೆ ಎಂದು ಅವರು ಕೇಳಿದರು. ಇವತ್ತು ನಮ್ಮ ಪಕ್ಷ ಅಭಿವೃದ್ಧಿಯ ಕಡೆ ಹೆಚ್ಚು ಗಮನಹರಿಸುತ್ತದೆ. ಈ ಕಾರಣಕ್ಕಾಗಿಯೇ ನಮ್ಮ ಪಕ್ಷಕ್ಕೆ ಓಟು ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದರು.

Share this Story:

Follow Webdunia kannada