Webdunia - Bharat's app for daily news and videos

Install App

ಕಾಯಕಯೋಗಿಗೆ ಹುಟ್ಟುಹಬ್ಬದ ಸಂಭ್ರಮ

Webdunia
ಮಂಗಳವಾರ, 1 ಏಪ್ರಿಲ್ 2008 (18:46 IST)
ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು (ಮಂಗಳವಾರ) 101 ನೇ ವರ್ಷಕ್ಕೆ ಕಾಲಿಟ್ಟರು.

ಸಿದ್ದಗಂಗಾ ಮಠದಲ್ಲಿ ಇಂದು ಹಬ್ಬದ ವಾತಾವರಣವೇ ಕಂಡು ಬಂದಿತ್ತು. ಶ್ರೀಗಳಿಗೆ ಶುಭಾಶಯ ಹೇಳಲು ಅಸಂಖ್ಯಾತ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಮಠಕ್ಕೆ ಧಾವಿಸಿದ್ದರು. ಈ ಸಂದರ್ಭದಲ್ಲಿ ಶ್ರೀಗಳಿಗೆ ಶುಭ ಕೋರಿ ಅವರಿಂದ ಆಶೀರ್ವಚನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಜಾತಿ, ಬೇಧವಿಲ್ಲದೆ ಪ್ರತಿಯೊಬ್ಬರಿಗೂ ಶಿಕ್ಷಣ ನೀಡುವ ಮಹಾನ್ ಯೋಗಿ ಎಂದು ಬಣ್ಣಿಸಿದರು.

ಮಾಜಿ ಸಚಿವ ರಾಮಚಂದ್ರ ಗೌಡ, ಮಾಜಿ ಸಚಿವ ಎಚ್. ಎಂ. ರೇವಣ್ಣ ಸೇರಿದಂತೆ ಅನೇಕ ರಾಜಕೀಯ ನಾಯಕರು ನಾಡಿಯ ಹಿರಿಯ ಚೇತನ, ತ್ರಿವಿಧ ದಾಸೋಹಿಯಾಗಿರುವ ಶ್ರೀಗಳಿಗೆ ಪುಷ್ಪ ಅರ್ಪಿಸಿ ನಮನ ಸಲ್ಲಿಸುವ ಮೂಲಕ ಶುಭ ಹಾರೈಸಿದರು.

ಹುಟ್ಟುಹಬ್ಬದ ದಿನದಂದು ಶ್ರೀಗಳು ಶಾಂತ ಚಿತ್ತದಿಂದ ಭಕ್ತಾದಿಗಳ ಹಾರೈಕೆಯನ್ನು ಪ್ರೀತಿಯಿಂದಲೇ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಮುಖ್ಯ ಕಾರ್ಯದರ್ಶಿಗಳು ಕ್ಷೇತ್ರಕ್ಕೆ ಆಗಮಿಸಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಮಠದ ಹಳೆಯ ವಿದ್ಯಾರ್ಥಿ ಎ.ಎಸ್ ಪಾಟೀಲ್ 54 ಲಕ್ಷ ರೂ. ಗಳ ಕಾರನ್ನು ಸ್ವಾಮೀಜಿಗಳಿಗೆ ನೀಡಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿಯೇ ಶ್ರೀಗಳ ಕುರಿತಾದ ಜೀವನ ದರ್ಶನ ಸಿಡಿಯನ್ನು ಬಿಡುಗಡೆ ಮಾಡಲಾಯಿತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments