Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಕೆ

ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಕೆ
, ಬುಧವಾರ, 26 ಮಾರ್ಚ್ 2014 (15:12 IST)
PR
PR
ಬೆಂಗಳೂರು: ಕುಮಾರಸ್ವಾಮಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಂದು ಜೆಡಿಎಸ್‌ನಲ್ಲಿ ಎದ್ದಿರುವ ಎಲ್ಲ ಗೊಂದಲಗಳಿಗೂ ಇಂದು ತೆರೆಬೀಳಲಿದ್ದು, ಲೋಕಸಭೆ ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ್ದರಿಂದ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಇಂದು ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿದ ಕುಮಾರಸ್ವಾಮಿ ನಂತರ ನಾಮಪತ್ರ ಸಲ್ಲಿಸಿದರು. ಚಿಕ್ಕಬಳ್ಳಾಪುರದಿಂದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಕಣಕ್ಕಳಿಯುತ್ತಿದ್ದು ಚುನಾವಣೆ ಕಣ ರಂಗೇರಿದೆ. ಈ ಕ್ಷೇತ್ರದಲ್ಲಿ ಎತ್ತಿನಹೊಳೆ ಯೋಜನೆಯನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸುವುದಾಗಿ ಮೊಯ್ಲಿ ಭರವಸೆ ನೀಡಿದ್ದಾರೆ.

ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಎಂಬ ಗೊಂದಲ ಮತದಾರರಲ್ಲಿತ್ತು. ಆದರೆ ಅಂತಿಮವಾಗಿ ಕೆಲವು ಕಾರಣಗಳಿಂದಾಗಿ ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿದರು.

Share this Story:

Follow Webdunia kannada