Select Your Language

Notifications

webdunia
webdunia
webdunia
webdunia

ನಾಳೆ ಕೆಪಿಸಿಸಿ ಅಧ್ಯಕ್ಷ ಘೋಷಣೆ?: ಪ್ರಮುಖ ನಾಯಕರ ತೀವ್ರ ಪೈಪೋಟಿ

Congress high command will finalise kpcc president name tomorrow
ಬೆಂಗಳೂರು , ಭಾನುವಾರ, 28 ಮೇ 2017 (12:51 IST)
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಚುರುಕು ಪಡೆದಿದೆ. ನಾಳೆ ದೆಹಲಿಯಲ್ಲಿ ಹೈಕಮಾಂಡ್ ರಾಜ್ಯ ನಾಯಕರ ಸಭೆ ನಡೆಸುತ್ತಿದ್ದು, ಬಹುತೇಕ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಅಂತಿಮಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ, ಪರಮೇಶ್ವರ್. ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಸೇರಿ ಪ್ರಮುಖ ನಾಯಕರು ಇಂದು ದೆಹಲಿಗೆ ತೆರಳುತ್ತಿದ್ದಾರೆ.

ಈ ಮಧ್ಯೆ, ಹಾಲಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮತ್ತು ಸಚಿವ ಡಿ..ಕೆ. ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ಇದೆ ಎನ್ನಲಾಗುತ್ತಿದ್ದು, ಅಧ್ಯಕ್ಷ ಸ್ಥಾನಕ್ಕೆ ಭಾರೀ ಲಾಬಿ ನಡೆದಿದೆ. ಬೆಳ್ಳ ಬೆಳಗ್ಗೆ ಸಚಿವ ಡಿ.ಕೆ. ಶಿವಕುಮಾರ್ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

ಇತ್ತ, ನಿನ್ನೆ ರಾತ್ರಿಯೇ ಸಿಎಂ ಸಿದ್ದರಾಮಯ್ಯ ಜೊತೆಯೂ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ನೀಡಿದ್ದ ಚುನಾವಣಾಉಸ್ತುವಾರಿಯನ್ನ ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ನನಗೊಂದು ಅವಕಾಶ ಕೊಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನ ಪರಿಗಣಿಸುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

100 ರೂ. ಗೆ ಬೆಂಗಳೂರಿನಲ್ಲಿ ಆಧಾರ್ ಕಾರ್ಡ್ ಸೇಲ್!