Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್: ವಿದೇಶದಿಂದ ಬಂದವರ ಮಾಹಿತಿ ಕಲೆ ಹಾಕೋಕೆ ಮುಂದಾದ ಜಿಲ್ಲಾಡಳಿತ

Webdunia
ಬುಧವಾರ, 18 ಮಾರ್ಚ್ 2020 (19:06 IST)
ಕೊರೋನಾ ನಿಯಂತ್ರಣಕ್ಕೆ ರಾಜ್ಯದ ಗಡಿ ಪ್ರದೇಶದ ಕಲಬುರಗಿ, ಬೀದರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಹೊರ ದೇಶದಿಂದ ಬರುವ ವಿದೇಶಿಗರ ಮಾಹಿತಿ  ಸಂಗ್ರಹ ಅವಶ್ಯಕ.

ಈ ನಿಟ್ಟಿನಲ್ಲಿ ಗೃಹ ಸಚಿವಾಲಯದ ಬ್ಯೂರೋ ಆಫ್ ಇಮ್ಮಿಗ್ರೇಷನ್ ಆಯುಕ್ತರಿಗೆ ಜಿಲ್ಲಾಡಳಿತದಿಂದ ಪತ್ರ ಬರೆದು ಮಾಹಿತಿ ಪಡೆಯಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

 ಭಾರತಿಯ ಪ್ರಜೆ ಅಲ್ಲದ ವಿದೇಶದ ಪ್ರಜೆಗಳು ಜಿಲ್ಲೆಗೆ ಆಗಮಿಸಿದಲ್ಲಿ  ನೋಂದಣಿ ಮಾಡುವುದು ಕಡ್ಡಾಯವಾಗಿದ್ದು, ಇದನ್ನು ಜಿಲ್ಲಾ ಪೆÇಲೀಸ್ ಅಧೀಕ್ಷಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದಲ್ಲದೆ ಕಳೆದ 15-20 ದಿನಗಳಿಂದ ವಿದೇಶದಿಂದ ಮರಳಿದವರ ಮಾಹಿತಿ ಸಹ ಕಲೆಹಾಕಿ ಅವರ ಮೇಲೆ ನಿಗಾ ವಹಿಸಿರಿ ಎಂದರು.

ಗಡಿ ಜಿಲ್ಲೆ ಬೀದರ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಿಗೆ ಹೊಂದಿಕೊಂಡಿದ್ದು, ಪುಣೆ, ಹೈದ್ರಾಬಾದ, ಮುಂಬೈನಿಂದ ಹೆಚ್ಚಿನ ಜನ ಬರುತ್ತಾರೆ. ಇಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಬೀದರ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹಾದೇವಪ್ಪ ಅವರಿಗೆ ಕಪಿಲ್ ಮೋಹನ ಅವರು ಸೂಚಿಸಿದರು.

ಕಲಬುರಗಿ, ಬೀದರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರೋಗ ಉಲ್ಬಣವಾಗದಂತೆ ನೋಡಿಕೊಳ್ಳಬೇಕು. ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಪ್ರಸ್ತುತ ಇರುವ ಸರ್ಕಾರಿ ವ್ಯವಸ್ಥೆಗಳ ಜೊತೆಗೆ ಖಾಸಗಿ ಅಸ್ಪತ್ರೆ ಮತ್ತು ಮೆಡಿಕಲ್ ಸಂಸ್ಥೆಗಳ ಸಹಾಯ ಅವಶ್ಯಕ. ಹೀಗಾಗಿ ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ನಡೆಸಿ ಅವರಿಗೆ ಮಾಹಿತಿ ನೀಡಬೇಕು. ಅಗತ್ಯವಿದ್ದರೆ ಅವರ ಸೇವೆ ಪಡೆಯಲು ಅಗತ್ಯ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳಿ ಎಂದು ಡಿ.ಸಿ.ಗಳಿಗೆ ನಿರ್ದೇಶನ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments