Select Your Language

Notifications

webdunia
webdunia
webdunia
webdunia

ಕೋಮುಶಕ್ತಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಭರವಸೆ

ಕೋಮುಶಕ್ತಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಭರವಸೆ
ಬೆಂಗಳೂರು , ಬುಧವಾರ, 16 ಅಕ್ಟೋಬರ್ 2013 (18:57 IST)
PR
ಜಾತಿ ಧರ್ಮದ ಹೆಸರಲ್ಲಿ ಹಿಂಸಾಚಾರ ನಡೆಸುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆಯುವಂತಹ ಶಕ್ತಿಗಳನ್ನು ಸುಮ್ಮನೆ ಬಿಡುವುದಿಲ್ಲ. ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರಿಗೆ ರಕ್ಷಣೆ ಒದಗಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ ಎಂದು ಭರವಸೆ ನೀಡಿದ್ದಾರೆ.

ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲಾಲ್ ಈದ್ಗಾ ಮೈದಾನದಲ್ಲಿ ಬಕ್ರಿದ್ ಹಬ್ಬದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

ಹಿಂದೂ, ಮುಸ್ಲಿಂ, ಕ್ರೈಸ್ತರೂ ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ಸಮುದಾಯದವರು ಶಾಂತಿ, ಸಹಬಾಳ್ವೆಯಿಂದ ಬದುಕಬೇಕು. ಇದು ಸರಕಾರದ ಜವಾಬ್ದಾರಿ ಕೂಡಾ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Share this Story:

Follow Webdunia kannada