Webdunia - Bharat's app for daily news and videos

Install App

ಗಾಂಧಿ ಬಲಿದಾನ ದಿನ ಬಿಜೆಪಿ ಸಮಾರಂಭ ಸರಿಯೇ?: ಡಿಕೆಶಿ

Webdunia
ಭಾನುವಾರ, 31 ಜನವರಿ 2010 (10:16 IST)
NRB
ಮಹಾತ್ಮಗಾಂಧಿ ಅವರು ಬಲಿದಾನ ಮಾಡಿದ ಹುತಾತ್ಮರ ದಿನಾಚರಣೆ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿರುವುದು ರಾಜ್ಯಕ್ಷಷ್ಟೇ ಅಲ್ಲ, ದೇಶಕ್ಕೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಮಹಾತ್ಮಗಾಂಧಿ ಕಗ್ಗೊಲೆಯಾದ ದಿನವಾಗಿರುವ ಇಂದು(ಶುಕ್ರವಾರ) ದೇಶವಲ್ಲದೆ ಇಡೀ ವಿಶ್ವವೇ ಹುತಾತ್ಮ ದಿನಾಚರಣೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷರಿಗೆ ಅಭಿನಂದನೆಯ ಅದ್ದೂರಿ ಸಮಾರಂಭ ಏರ್ಪಡಿಸಿ ಹಬ್ಬದ ವಾತಾವರಣ ನಿರ್ಮಾಣ ಮಾಡಿರುವುದು ಸರಿಯಲ್ಲ ಎಂದರು.

ನೋವಿನ ದಿನದ ವೇಳೆ ಹಬ್ಬದ ವಾತಾವರಣ ನಿರ್ಮಿಸಿ ಮಹಾತ್ಮನಿಗೆ ಅಗೌರವ ತೋರಿರುವ ಬಿಜೆಪಿ ಮುಖಂಡರು ನಾಡಿನ,ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಸರಳತೆ, ಸಮಾನತೆ, ಶಾಂತಿ ಸಹಬಾಳ್ವೆಯ ಸಂದೇಶ ಸಾರಿದ ಗಾಂಧಿ ಅವರ ಬಗ್ಗೆ ಬಿಜೆಪಿಯವರಿಗೆ ಕಿಂಚಿತ್ತಾದರೂ ಗೌರವವಿದ್ದರೆ, ಇಂತಹ ಅದ್ದೂರಿ ಸಮಾರಂಭ ಏರ್ಪಡಿಸುತ್ತಿರಲಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments