Webdunia - Bharat's app for daily news and videos

Install App

ಜನಸಮುದಾಯಕ್ಕೆ ಅರಸು ಆದರ್ಶ: ಪ್ರಕಾಶ್

Webdunia
ಸೋಮವಾರ, 31 ಡಿಸೆಂಬರ್ 2007 (18:37 IST)
NEWS ROOM
ಮಾಜಿಕ ಅಸಮಾನತೆಗಳನ್ನು ಹೊಡೆದೋಡಿಸಿ ಎಲ್ಲ ವರ್ಗ ಮತ್ತು ಜಾತಿಗಳಿಗೆ ನ್ಯಾಯ ದೊರಕಿಸಿಕೊಟ್ಟ ಮಾಜಿ ಮುಖ್ಯಮಂತ್ರಿ ದ ಿ| ದೇವರಾಜ ಅರಸುರವರು ಜನಸಮುದಾಯಕ್ಕೆ ಆದರ್ಶ ಎಂದು ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಡಿವಾಳ ಯುವ ವೇದಿಕೆ ನಗರದಲ್ಲಿ ಆಯೋಜಿಸಿದ್ದ ದ ಿ| ಅರಸು ಸ್ಮರಣೋತ್ಸವ ಹಾಗೂ ಮಡಿವಾಳ ಸಮಾಜದ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಡಿವಾಳ ಜನಾಂಗ ಎಲ್ಲ ರಂಗಗಳಲ್ಲೂ ಹಿಂದುಳಿದಿರುವ ಕುರಿತು ವಿಷಾದ ವ್ಯಕ್ತಪಡಿಸಿದ ಅವರು, ಮಡಿವಾಳ ಜನಾಂಗದ ಉದ್ದಾರಕ್ಕಾಗಿ ಒಳ ಮೀಸಲಾತಿ ಕಲ್ಪಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಹಿಂದಿನ ಸರ್ಕಾರ ರಚಿಸಿದ್ದ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷನಾಗಿ ಪ್ರಾಮಾಣಿಕ ಕಾರ್ಯ ಮಾಡುತ್ತಿದ್ದ ತಾವು ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ಕಾರ್ಯ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.

ಆಚಾರ-ವಿಚಾರ-ನಡವಳಿಕೆಗಳಲ್ಲಿ ದೇವರಾಜ ಅರಸು, ನಿಜಲಿಂಗಪ್ಪ ಹಾಗೂ ರಾಮಕೃಷ್ಣ ಹೆಗಡೆ ಅವರು ರಾಜ್ಯದ ಮಾದರಿ ಮುಖ್ಯಮಂತ್ರಿಗಳಾಗಿದ್ದಾರೆ ಎಂದು ಅಭಿಪ್ರಾಯಪಟ್ಟ ಪ್ರಕಾಶ್ ಈ ಮೂವರದು ಪ್ರಭಾವಶಾಲಿ ವ್ಯಕ್ತಿತ್ವ ಎಂದು ಬಣ್ಣಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments