Select Your Language

Notifications

webdunia
webdunia
webdunia
webdunia

ಜಯಪ್ರಕಾಶ್ ಹೆಗ್ಡೆ ಆಪ್ತ ಸಹಾಯಕ ಜಗನ್ನಾಥ್ ಆತ್ಮಹತ್ಯೆಗೆ ಶರಣು

ಜಯಪ್ರಕಾಶ್ ಹೆಗ್ಡೆ ಆಪ್ತ ಸಹಾಯಕ ಜಗನ್ನಾಥ್ ಆತ್ಮಹತ್ಯೆಗೆ ಶರಣು
, ಬುಧವಾರ, 14 ಆಗಸ್ಟ್ 2013 (16:31 IST)
PR
PR
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಸಂಸತ್ ಸದಸ್ಯ ಜಯಪ್ರಕಾಶ್ ಹೆಗ್ಡೆ ಅವರ ಆಪ್ತ ಸಹಾಯಕ ಜಗನ್ನಾಥ್(48) ಅವರು ಬುಧವಾರ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ 4ರಲ್ಲಿ ನೇಣು ಬಿಗಿದುಕೊಂಡಿದ್ದ ಅವರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಕೊಠಡಿ ಬುಕ್ ಮಾಡಿದ್ದ ಜಗನ್ನಾಥ್ ಬೆಳಿಗ್ಗೆ ಎಷ್ಟು ಹೊತ್ತಾದರೂ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಪ್ರವಾಸಿ ಮಂದಿರದ ಸಿಬ್ಬಂದಿ ಕೊಠಡಿಯ ಬಾಗಿಲನ್ನು ಒಡೆದು ನೋಡಿದಾಗ ಜಗನ್ನಾಥ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಜಗನ್ನಾಥ್ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರಿಂದ ನೇಣಿಗೆ ಶರಣಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

Share this Story:

Follow Webdunia kannada