Webdunia - Bharat's app for daily news and videos

Install App

ಜೆಡಿಎಸ್ ಬಿಟ್ಟು ಹೋಗಲ್ಲ: ಚನ್ನಿಗಪ್ಪ

Webdunia
ಬುಧವಾರ, 6 ಆಗಸ್ಟ್ 2008 (11:48 IST)
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಪಕ್ಷ ಬಿಡುವ ಬಗ್ಗೆ ಮಾತನಾಡಿದ್ದ ಮಾಜಿ ಸಚಿವ ಚನ್ನಿಗಪ್ಪ ದಿಢೀರನೆ ತಮ್ಮ ಮಾತಿನ ವರಸೆಯನ್ನು ಬದಲಾಯಿಸಿದ್ದು, ಪಕ್ಷ ತೊರೆಯದಿರಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.

ನನ್ನ ಜೀವನ ಪರ್ಯಂತ ದೇವೇಗೌಡರ ಕುಟುಂಬದ ಅನುಯಾಯಿಯಾಗಿ ಬಾಳುತ್ತೇನೆ ಎಂದು ಚನ್ನಿಗಪ್ಪ ಘೋಷಿಸುವ ಮೂಲಕ ಇದುವರೆಗೆ ತೆರೆಮರೆಯಲ್ಲಿ ನಡೆದ ಪ್ರಹಸನಕ್ಕೆ ನಾಂದಿ ಹಾಡಿದ್ದಾರೆ.

ತಮ್ಮ ಪುತ್ರನೊಂದಿಗೆ ಬಿಜೆಪಿ ಸೇರಲು ತೀರ್ಮಾನಿಸಿದ್ದ ಚನ್ನಿಗಪ್ಪ ಅವರ ಜೊತೆ ಮಂಗಳವಾರ ತಡರಾತ್ರಿವರೆಗೆ ಮಾತುಕತೆ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕರಾದ ಎಚ್.ಸಿ. ಬಾಲಕೃಷ್ಣ, ಪುಟ್ಟಣ್ಣ, ಮಾಜಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಹಲವು ನಾಯಕರು ಪಕ್ಷಕ್ಕೆ ವಾಪಸ್ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಮಾತುಕತೆಯ ಬಳಿಕ ಮಾತನಾಡಿದ ಚನ್ನಿಗಪ್ಪ, ದೇವೇಗೌಡರಿಂದ ಕುಮಾರಸ್ವಾಮಿ ಮತ್ತು ಜೆಡಿಎಸ್‌‌ಗೆ ಅನ್ಯಾಯವಾಗಿರಬಹುದು. ಆದರೆ, ಅವರಿಂದ ನನಗಾಗಲೀ ನನ್ನ ಕುಟುಂಬಕ್ಕಾಗಲಿ ಯಾವುದೇ ಅನ್ಯಾಯವಾಗಿಲ್ಲ. ನಾನು ದೇವೇಗೌಡರ ಕುಟುಂಬದ ಅನುಯಾಯಿ ಎಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

ಆಪರೇಷನ್ ಸಿಂಧು: ಇರಾನ್, ಇಸ್ರೇಲ್‌ನಿಂದ 4,400 ಭಾರತೀಯರು ತಾಯ್ನಾಡಿಗೆ

Show comments