Webdunia - Bharat's app for daily news and videos

Install App

ಜೈಲಿನಲ್ಲಿರುವ ಶಾಸಕರ ಕ್ಷೇತ್ರಾಭಿವೃದ್ದಿ ಮಾಡ್ತೀವಿ ಆದ್ರೆ ಸಂತೋಷ್‌ ಲಾಡ್‌ ಅವರನ್ನು ಸಂಪುಟದಿಂದ ಕೈ ಬಿಡಲ್ಲ.

Webdunia
ಶುಕ್ರವಾರ, 18 ಅಕ್ಟೋಬರ್ 2013 (10:58 IST)
PR
PR
ಜೈಲಿಗೆ ಹೋಗಿರುವ ಮೂವರು ಶಾಸಕರ ಕ್ಷೇತ್ರಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತೇವೆ. ನಾವು ಯಾರ ಬಗ್ಗೆಯೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ನಿಜವಾಗಲೂ ಅಕ್ರಮ ಎಸಗಿದ್ದರೆ ಅಂಥವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಆದರೆ ಸಂತೋಷ್‌ ಲಾಡ್‌ ಅದಿರು ನಾಪತ್ತೆ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರನ್ನು ಕೈ ಬಿಡುವ ಪ್ರೆಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ನ ನಾಯಕ ಪರಮೇಶ್ವರ್‌ ನಾಯಕ್‌ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಬಳ್ಳಾರಿಯ ಕಾಂಗ್ರೆಸ್‌ ಮುಖಂಡ ಪರಮೇಶ್ವರ್‌ ನಾಯಕ್‌ ಸಂತೋಷ್‌ ಲಾಡ್‌ ವಿಷಯದಲ್ಲಿ ಯಾವುದೇ ಬದಲಾವಣೆಗಳು ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. " ತಪ್ಪು ಮಾಡಿದವರು ಈಗಾಗಲೇ ಜೈಲಿನಲ್ಲಿದ್ದಾರೆ. ಆದ್ರೆ ಸಂತೋಷ್‌ಲಾಡ್‌ ತಪ್ಪು ಮಾಡಿಲ್ಲ. ಹೀಗಾಗಿ ಸಂತೋಷ್‌ಲಾಡ್‌ ಅವರನ್ನು ಸಂಪುಟದಿಂದ ಕೈ ಬಿಡುವ ಯೋಚನೆಯೇ ಇಲ್ಲ. ಇದನ್ನು ಈಗಾಗಲೇ ಸಿಎಂ ಸಿದ್ರಾಮಯ್ಯನವರು ಕೂಡ ಸ್ಪಷ್ಟ ಪಡಿಸಿದ್ದಾರೆ ಎಂದು ಪರಮೇಶ್ವರ್‌ ನಾಯಕ್ ಹೇಳಿದ್ರು.

ನಾವು ಯಾರ ಬಗ್ಗೆಯೂ ದ್ವೇಶದ ರಾಜಕಾರಣ ಮಾಡುವುದಿಲ್ಲ. ತಪ್ಪು ಮಾಡಿದವರು ಈಗಾಗಲೇ ಜೈಲಿನಲ್ಲಿದ್ದಾರೆ. ಇದನ್ನು ಅರಿತುಕೊಂಡು ಶ್ರೀರಾಮುಲು ವಿವೇಚನೆಯಿಂದ ಮಾತಾಡಬೇಕು ಎಂದು ಶ್ರೀ ರಾಮುಲು ಮಾತಿಗೆ ತಿರುಗೇಟು ನೀಡಿದ್ರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments