Webdunia - Bharat's app for daily news and videos

Install App

ಜ್ಯೋತಿಷ್ಯಕ್ಕೆ ಶರಣಾದ ಗೌಡರ ಕುಟುಂಬ

Webdunia
ಬುಧವಾರ, 10 ಅಕ್ಟೋಬರ್ 2007 (15:20 IST)
ಜೆಡಿಎಸ್ ವರಿಷ್ಠ ದೇವೇಗೌಡರ ಕುಟುಂಬದವರಿಗೆ ದೇವರ ಭಕ್ತಿ ಹೆಚ್ಚು. ಜ್ಯೋತಿಷ್ಯದ ಮೇಲೆ ಅಪಾರ ನಂಬಿಕೆ. ಹಾಗಾಗಿ ತೊಂದರೆ ಎದುರಾಗಲಿ, ಎದುರಾಗದಿರಲಿ, ಜ್ಯೋತಿಷ್ಯರನ್ನು ಕಾಣುವುದು ಅವರ ಕುಟುಂಬದವರ ವಾಡಿಕೆ.

ಹೀಗಾಗಿ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡಿದ್ದರಿಂದ ಖ್ಯಾತ ಜ್ಯೋತಿಷಿ ಸೋಮಯಾಜಿ ಅವರನ್ನು ಭೇಟಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸುತ್ತಾರೆ. ನಿಧಾನವಾಗಿ ಪ್ರಧಾನಿ ಹುದ್ದೆಯನ್ನು ಅಲಂಕರಿಸುತ್ತಾರೆ ಎಂಬದು ಜ್ಯೋತಿಷಿ ಸೋಮಯಾಜಿ ಹೇಳಿರುವ ಜ್ಯೋತಿಷ್ಯ.

ಬುಧವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುರುಘ ರಾಜೇಂದ್ರ ಶರಣರನ್ನು ಭೇಟಿ ನೀಡಿ ಆಶಿರ್ವಾದ ಪಡೆದಿದ್ದಾರೆ.

ಚುನಾವಣೆಗೆ ಜೆಡಿಎಸ್ ಸಜ್ಜು: ಈ ನಡುವೆ ನಮ್ಮ ಮುಂದಿರುವುದು ಚುನಾವಣೆ ಹೊರತುಪಡಿಸಿ ಇನ್ನೇನಿಲ್ಲ ಎಂದು ದೇವೇಗೌಡರು ಹೇಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಕುದುರೆ ವ್ಯಾಪಾರ ಮಾಡುವುದಿಲ್ಲ ಎಂದು ಧರಂಸಿಂಗ್ ಹೇಳಿದ್ದಾರೆ. ಮೋಸ, ವಂಚನೆ ಎಂದು ಪರಸ್ಪರ ಕಿತ್ತಾಡಿದ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಬಂಗಾರಪ್ಪ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments