Select Your Language

Notifications

webdunia
webdunia
webdunia
webdunia

ಟಿಕೇಟ್ ಬಯಸಿ ಬಂದರೆ ಸ್ವಾಗತವಿಲ್ಲ: ಜಿ. ಪರಮೇಶ್ವರ್

ಟಿಕೇಟ್ ಬಯಸಿ ಬಂದರೆ ಸ್ವಾಗತವಿಲ್ಲ: ಜಿ. ಪರಮೇಶ್ವರ್
ಬೆಂಗಳೂರು , ಸೋಮವಾರ, 25 ಫೆಬ್ರವರಿ 2013 (15:44 IST)
PR
PR
ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಗಳಲ್ಲದವರ ಪಕ್ಷ ಸೇರ್ಪಡೆಗೆ ಯಾವುದೇ ಅಡೆತಡೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌, ಪಕ್ಷಾಂತರಿಗಳಿಗೆ ಮುಕ್ತ ಆಹ್ವಾನ ನೀಡಿದ್ದಾರೆ.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನ್ಯ ಪಕ್ಷಗಳಿಂದ ಅನೇಕ ಮುಖಂಡರು, ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೆ ಮುಂದಾಗಿದ್ದಾರೆ. ಆದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಬಯಸಿ ಯಾರೂ ಕೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವ ಅಗತ್ಯವಿಲ್ಲ. ಬದಲಿಗೆ, ಪಕ್ಷದ ತತ್ವ - ಸಿದ್ಧಾಂತಗಳನ್ನು ಒಪ್ಪಿಕೊಂಡು, ಕಾಂಗ್ರೆಸ್‌ ಸೇರ್ಪಡೆಗೊಳ್ಳುವವರನ್ನು ಮುಕ್ತವಾಗಿ ಸ್ವಾಗತಿಸಲಾಗುವುದು ಎಂದರು.

ಅನೇಕ ಸಚಿವರು, ಶಾಸಕರು ಬೇರೆ ಪಕ್ಷಗಳಿಂದ ಈಗ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ. ಆದರೆ, ಈ ವಲಸಿಗರ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಳಿಕ ಹೈಕಮಾಂಡ್‌ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪರಮೇಶ್ವರ್ ಹೇಳಿದರು.

Share this Story:

Follow Webdunia kannada