Webdunia - Bharat's app for daily news and videos

Install App

ತಪ್ಪಿತಸ್ಥರ ರಕ್ಷಣೆಗಾಗಿ ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್: ಆರ್‌.ಅಶೋಕ್ ಆಕ್ರೋಶ

Sampriya
ಶನಿವಾರ, 6 ಏಪ್ರಿಲ್ 2024 (15:08 IST)
ಬೆಂಗಳೂರು: ಸಾಕ್ಷಿ ವಿಚಾರಣೆಗೂ, ಆರೋಪಿ ವಿಚಾರಣೆಗೂ ವ್ಯತ್ಯಾಸ ತಿಳಿಯದ ಕಾಂಗ್ರೆಸ್ ಪಕ್ಷ ಜನರ ದಿಕ್ಕನ್ನು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಚೆಗೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಬಿಜೆಪಿ ಮುಖಂಡನ ವಿಚಾರಣೆಗೆ ಒಳಪಡಿಸಿದ್ದಕ್ಕೆ ಕಾಂಗ್ರೆಸ್ ಕೇಸರಿ ಪಡೆ ಮೇಲೆ ಗಂಭೀರ ಆರೋಪ ಮಾಡಿತ್ತು. ಇದರ ಬೆನ್ನಲ್ಲೇ ಎನ್‌ಐಎ ಸ್ಪಷ್ಟನೆ ನೀಡಿ ಬಿಜೆಪಿ ಮುಖಂಡನನ್ನು ಸಾಕ್ಷಿ ಸಲುವಾಗಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೊಂದಲವನ್ನು ಬಗೆಹರಿಸಿತು. ಇದೀಗ ಈ ಸಂಬಂಧ ಆರ್‌ ಅಶೋಕ್ ಅವರು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅದು ಬೆಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಘಟನೆ ಇರಬಹುದು ಅಥವಾ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ಇರಬಹುದು, ಹೇಗಾದರೂ ಮಾಡಿ ತಪ್ಪಿತಸ್ಥರನ್ನು ರಕ್ಷಣೆ ಮಾಡಲೇ ಬೇಕು ಎಂದು ಹಪಾಹಪಿ ಪಡುತ್ತಿರುವ ಕಾಂಗ್ರೆಸ್ ನಾಯಕರು, ಸುಳ್ಳಿನ ಮೇಲೆ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ.

FSL ವರದಿ ಬರುವ ಮುನ್ನವೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿಯೇ ಇಲ್ಲ ದೇಶದ್ರೋಹಿಗಳ ಪರ ವಕಾಲತ್ತು ವಹಿಸಿದ್ದ ಕಾಂಗ್ರೆಸ್ ನಾಯಕರು, ಬಾಂಬ್ ಬ್ಲಾಸ್ಟ್ ಆದ ಕೂಡಲೇ ಅದು ಕುಕ್ಕರ್ ಸ್ಫೋಟ, ಲವ್ ಇಂಟೆನ್ಸಿಟಿ ಬಾಂಬ್, business rivalry ಇಂದ ಮಾಡಿರುವ ಕೃತ್ಯ ಎಂದು ಕಥೆ ಕಟ್ಟಲು ಹೊರಟಿದ್ದರು.

NIA ವಿಚಾರಣೆ ನಡೆಯುತ್ತಿರುವಾಗಲೇ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈಗ ಹೊಸ ಸುಳ್ಳೊಂದನ್ನು ಹರಿಬಿಟ್ಟಿರುವ ಕಾಂಗ್ರೆಸ್ ಪಕ್ಷ, ಸಾಕ್ಷಿ ವಿಚಾರಣೆಗೂ, ಆರೋಪಿ ವಿಚಾರಣೆಗೂ ವ್ಯತ್ಯಾಸ ತಿಳಿಯದೆ ಜನರನ್ನು ದಿಕ್ಕು ತಪ್ಪಿಸಲು ಪ್ರಯತ್ನ ಮಾಡುತ್ತಿದೆ.

ವಿಚಾರಣೆ ಪೂರ್ಣವಾಗುವ ಮುನ್ನವೇ ಈ ರೀತಿ ಹೇಳಿಕೆಗಳನ್ನು ನೀಡಿ ದುಂಬಾಲು ಬೀಳುತ್ತಿರುವ ಕಾಂಗ್ರೆಸ್ ನಾಯಕರ ನಡೆ ನೋಡಿದರೆ ಉಗ್ರರನ್ನು ರಕ್ಷಿಸಲು ಹೊರಟಿರುವುದು ಸ್ಪಷ್ಟವಾಗುತ್ತದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments