Webdunia - Bharat's app for daily news and videos

Install App

ತಮಿಳುನಾಡು ಬಸ್‌ಗೆ ಬೆಂಕಿ: 13 ಬಂಧನ

Webdunia
ಶನಿವಾರ, 22 ಸೆಪ್ಟಂಬರ್ 2007 (16:24 IST)
ಶ್ರೀರಾಮನ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಹೇಳಿಕೆಗಳನ್ನು ವಿರೋಧಿಸಿ ಆ ರಾಜ್ಯದ ಬಸ್‌ಗೆ ಬೆಂಕಿ ಹಚ್ಚಿ ಇಬ್ಬರು ವ್ಯಕ್ತಿಗಳನ್ನು ಸಜೀವ ದಹನ ಮಾಡಿದ ಹಾಗೂ ಸೆಲ್ವಿ ಅವರ ಮನೆಯ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು ಒಟ್ಟು 13 ಮಂದಿಯನ್ನು ಬಂಧಿಸಿದ್ದಾರೆ.

ಬಸ್ಸಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂಧಿತರಾದವರಲ್ಲಿ 10 ಮಂದಿ ಬೊಮ್ಮನಹಳ್ಳಿ ನಿವಾಸಿಗಳು. ಬಂಧಿತರು ಯಾವ ಸಂಘಟನೆಗೆ ಸೇರಿದವರು ಎಂಬುದನ್ನು ಪೊಲೀಸರು ಬಹಿರಂಗಪಡಿಸುತ್ತಿಲ್ಲ.

ಕರುಣಾನಿಧಿ ಪುತ್ರಿ ಸೆಲ್ವಿ ಮನೆಮೇಲೆ ದಾಳಿ ಹಾಗೂ ಹೊಸೂರು ರಸ್ತೆಯಲ್ಲಿ ತಮಿಳುನಾಡು ಬಸ್ಸಿಗೆ ಬೆಂಕಿ ಹಚ್ಚಿದ ಕೃತ್ಯಗಳನ್ನು ಒಂದೇ ತಂಡ ನಿರ್ವಹಿಸಿದೆ ಎಂದು ಭಾವಿಸಲಾಗುತ್ತಿದೆ. ಪ್ರಕರಣದಲ್ಲಿ ಇನ್ನೂ ಹೆಚ್ಚು ಮಂದಿ ತೊಡಗಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ ಪೊಲೀಸರು ಉಳಿದವರ ಬಂಧನಕ್ಕೆ ಸಜ್ಜಾಗುತ್ತಿದ್ದಾರೆ.

ಜೆಲ್ಲಿ ವ್ಯಾಪಾರ ಮಾಡುವ ಮುರುಗನ್ ಸೆಲ್ವಿ ಅವರ ಮನೆ ತೋರಿಸಿ, ಪೂರ್ವ ಯೋಜನೆ ಸಿದ್ಧಪಡಿಸುವಲ್ಲಿ ನೆರವಾಗಿದ್ದ. ರಾಜೇಶ್ ಎಂಬಾತ ಗೃಹೋಪಯೋಗಿ ವಸ್ತುಗಳ ವ್ಯಾಪಾರ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಆರೋಪಿಗಳಲ್ಲಿ ರಂಗಸ್ವಾಮಿ ಎಂಬಾತ ವಕೀಲನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗುವುದರ ಜೊತೆಗೆ ಇತರ ಆರೋಪಿಗಳಿಗೆ ಆಶ್ರಯ ನೀಡಿದ್ದ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments