Webdunia - Bharat's app for daily news and videos

Install App

ಧನಂಜಯ್ ಕುಮಾರ್, ಬಸವರಾಜ್ ಬಿಜೆಪಿಗೆ ಸೇರುವುದಕ್ಕೆ ಅಪಸ್ವರ

Webdunia
ಶುಕ್ರವಾರ, 10 ಜನವರಿ 2014 (11:51 IST)
PR
PR
ಬಿಜೆಪಿಯನ್ನು ತೊರೆದು ಕೆಜೆಪಿಯನ್ನು ಕಟ್ಟಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವ ಮುಖಂಡ ಯಡಿಯೂರಪ್ಪನವರ ಇಬ್ಬರು ಬೆಂಬಲಿಗರು ಬಿಜೆಪಿಗೆ ಸೇರುವುದಕ್ಕೆ ಈಗ ಅಪಸ್ವರ ಎದ್ದಿದೆ. ಧನಂಜಯ ಕುಮಾರ್, ಸಂಸದ ಬಸವರಾಜ್ ಸೇರ್ಪಡೆಗೆ ಪಕ್ಷದಲ್ಲಿ ತೀವ್ರ ಅಪಸ್ವರ ಹೊಗೆಯಾಡಿದೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲೂ ಈ ಕುರಿತು ಚರ್ಚೆಯಾಗಿದೆ. ಬಿಜೆಪಿ ವರಿಷ್ಠರ ವಿರುದ್ಧ ಇಬ್ಬರೂ ನಾಯಕರು ವಾಗ್ದಾಳಿ ನಡೆಸಿದ್ದರು. ಆದ್ದರಿಂದ ಇಬ್ಬರನ್ನೂ ದೂರವಿಡಲು ನಿರ್ಧರಿಸಲಾಗಿದೆ. ಕೆಜೆಪಿಯ ಉಳಿದ ಸದಸ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಒಪ್ಪಿಗೆ ಸಿಕ್ಕಿದ್ದರೂ ಧನಂಜಯ್ ಕುಮಾರ್ ಮತ್ತು ಬಸವರಾಜ್ ಸೇರ್ಪಡೆಗೆ ಮಾತ್ರ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಅಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಸಭೆ ಡನೆಯುತ್ತಿದೆ. 13 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಚರ್ಚಿಸಲಾಯಿತು. ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಾಯಿತು. ಜಗದೀಶ್ ಶೆಟ್ಟರ್, ಸಿ.ಟಿ.ರವಿ, ಸದಾನಂದ ಗೌಡ, ಈಶ್ವರಪ್ಪ, ಸಂತೋಷ್ ಮುಂತಾದ ಮುಖಂಡರು ಭಾಗಿಯಾಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments