Webdunia - Bharat's app for daily news and videos

Install App

ನಕಲಿ ಸಹಿ ಮಾಡಿ 30 ಸಾವಿರ ದೋಚಿದ ಸಮಾಜ ಕಲ್ಯಾಣಾಧಿಕಾರಿ.

Webdunia
ಶುಕ್ರವಾರ, 29 ನವೆಂಬರ್ 2013 (17:34 IST)
PR
PR
ನಕಲಿ ಸಹಿಯನ್ನು ಹಾಕಿ ಸರ್ಕಾರದ ಖಜಾನೆಯ ಹಣವನ್ನು ದೋಚಿದ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಹಣ ದೋಚಿದ ವ್ಯಕ್ತಿ ಯಾರೋ ಅನಾಮಿಕ ಅಲ್ಲ.. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ..!

ಗಂಗಾವತಿ ತಾಲೂಕಿನ ಸಮಾಜ ಕಲ್ಯಾಣಾಧಿಕಾರಿ ಟಿ.ಸಿ. ಪ್ರಕಾಶ್ ಅವರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೋಭಾ ಅವರ ನೊಕಲಿ ಸಹಿಯನ್ನು ಮಾಡಿ 30 ಸಾವಿರ ರೂಪಾಯಿಗಳನ್ನು ಡ್ರಾ ಮಾಡಿಕೊಂಡಿದ್ದಾರೆ. ಯಾಕಪ್ಪಾ ಹೀಗೆ ಮಾಡಿದೆ ಅಂತ ಕೇಳಿದ್ರೆ, ಇದೆಲ್ಲಾ ಸಮಾಜ ಕಲ್ಯಾಣದ ಕಾರ್ಯಕ್ಕಾಗಿ ಅಂತ ಸುಳ್ಳು ಹೇಳ್ತಾರೆ..

ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟ ಮತ್ತು ಕಟ್ಟಿಗೆ ಖರೀದಿಸಬೆಕಿತ್ತು. ಹೀಗಾಗಿ ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಶೋಭಾ ಅವರ ಸಹಿಯನ್ನು ಫೋರ್ಜರಿ ಮಾಡಿದೆ. ಆ ಮೂಲಕ 30 ಸಾವಿರ ರೂಪಾಯಿಗಳನ್ನು ಪಡೆದು ವಿದ್ಯಾರ್ತಿಗಳಿಗೆ ಊಟ ನೀಡಿದ್ದೇನೆ ಎಂದು ತಮ್ಮ ಸಮಾಜ ಸೇವೆಯ ಪಟ್ಟಿಯನ್ನು ಒಂದೊಂದಾಗಿಯೇ ಬಿಚ್ಚಿಟ್ಟರು..!

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಸಹಿಯನ್ನು ದುರ್ಬಳಕೆ ಮಾಡಿಕೊಂಡಿದ್ದು ಕಾನೂನು ಬಾಹಿರವಾಗಿದ್ದು, ಡ್ರಾ ಮಾಡಿಕೊಂಡ 30 ಸಾವಿರ ರೂಪಾಯಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೋಭಾ ಸರ್ಕಾರಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣಾಧಿಕಾರಿ ಪ್ರಕಾಶ ಅವರನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಜಯರಾಮ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments