Webdunia - Bharat's app for daily news and videos

Install App

ನವೆಂಬರ್ 16ರಂದು ಬೆಂಗಳೂರಿನಲ್ಲಿ ನರೇಂದ್ರ ಮೋದಿ ರ‌್ಯಾಲಿ

Webdunia
ಬುಧವಾರ, 16 ಅಕ್ಟೋಬರ್ 2013 (14:14 IST)
PR
PR
2014 ರ ಮಹಾಸಮರಕ್ಕೆ ಕಮಲಪಾಳೆಯದ ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರಿನಲ್ಲಿ ಬಿಜೆಪಿಯ ಪ್ರಮುಖರ ಸಭೆ ಇಂದು ನಡೆಯಿತು. ಸಭೆಯಲ್ಲಿ ನರೇಂದ್ರ ಮೋದಿ ರ‌್ಯಾಲಿ ಸೇರಿದಂತೆ ಹಲವು ವಿಚಾರಗಳನ್ನು ಕುರಿತು ಮತ್ತು 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು. ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಿಂದ ಆರಂಭಿಸಿ ಮುಖ್ಯಮಂತ್ರಿ ಗೃಹಕಚೇರಿಗೆ ಮುತ್ತಿಗೆ ಹಾಕಲು ಕೂಡ ಸಭೆಯಲ್ಲಿ ನಿರ್ಧರಿಸಲಾಗಿದೆ.

ನವೆಂಬರ್ 7, 8, 9 ಮತ್ತು 10ರಂದು ರಾಜ್ಯಾದ್ಯಂತ ಸಮಾವೇಶ ನಡೆಸಲು ಬಿಜೆಪಿ ತೀರ್ಮಾನಿಸಿದೆ. ನರೇಂದ್ರ ಮೋದಿ ನವೆಂಬರ್ 16ರಂದು ಬೆಂಗಳೂರಿನಲ್ಲಿ ಬೃಹತ್ ರ‌್ಯಾಲಿಯನ್ನು ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.

PR
PR
ಇವತ್ತು ನಡೆದ ಸಭೆಯಲ್ಲಿ ಯಡಿಯೂರಪ್ಪನವರ ಬಗ್ಗೆ ಯಾವುದೇ ವಿಚಾರ ಪ್ರಸ್ತಾಪವಾಗಿಲ್ಲ. ಅದನ್ನು ಸಂಪೂರ್ಣವಾಗಿ ಪಕ್ಷದ ಹೈಕಮಾಂಡ್‌ಗೆ ವರ್ಗಾವಣೆ ಮಾಡಿದ್ದೇವೆ ಎಂದು ಪ್ರಮುಖರು ತಿಳಿಸಿದ್ದಾರೆ. ಸಭೆಯಲ್ಲಿ ಜಗದೀಶ್ ಶೆಟ್ಟರ್, ಈಶ್ವರಪ್ಪ, ಸದಾನಂದ ಗೌಡ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು. ಬೆಂಗಳೂರಿನ ನರೇಂದ್ರ ಮೋದಿ ರ‌್ಯಾಲಿಯಲ್ಲಿ ಸುಮಾರು 5 ಲಕ್ಷ ಜನರನ್ನು ಸೇರಿಸಲು ನಿರ್ಧರಿಸಲಾಗಿದೆ.

ಬೆಂಗಳೂರಿನ ಹೊರವಲಯದಲ್ಲಿ ಈ ಸಭೆಯನ್ನು ನಡೆಸುವ ಬಗ್ಗೆ ಮುಖಂಡರು ಚಿಂತನೆ ನಡೆಸಿದರು. ಬೆಂಗಳೂರಿನಲ್ಲಿ ಮೊದಲ ರ‌್ಯಾಲಿಯಾದ ನಂತರ ಇನ್ನುಳಿದ ಸ್ಥಳಗಳಲ್ಲಿ ಬೇರೆ ಬೇರೆ ರ‌್ಯಾಲಿಗಳನ್ನು ನಡೆಯಲು ನಿರ್ಧರಿಸಲಾಯಿತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments