Select Your Language

Notifications

webdunia
webdunia
webdunia
webdunia

ನಾನೇ ಶಿವಮೊಗ್ಗದ ಬಿಜೆಪಿ ಲೋಕಸಭೆ ಅಭ್ಯರ್ಥಿ: ಯಡ್ಡಿ ಘೋಷಣೆ

ನಾನೇ ಶಿವಮೊಗ್ಗದ ಬಿಜೆಪಿ ಲೋಕಸಭೆ ಅಭ್ಯರ್ಥಿ: ಯಡ್ಡಿ ಘೋಷಣೆ
ಶಿವಮೊಗ್ಗ , ಮಂಗಳವಾರ, 4 ಫೆಬ್ರವರಿ 2014 (20:44 IST)
PR
ಮುಂಬರುವ ಲೋಕಸಭೆಯ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಕಣಕ್ಕಿಳಿಯಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾಲ್ಕೂ ತಾಲೂಕಿನ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿರುವುದರಿಂದ ಕಣಕ್ಕಿಳಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಎಳೆದ ಯಡಿಯೂರಪ್ಪ, ಶಿವಮೊಗ್ಗದ ಜನತೆ ನನ್ನನ್ನು ಸಂಸತ್ತಿಗೆ ಕಳುಹಿಸಲು ನಿರ್ಧರಿಸಿದ್ದಾರೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನಾಯಕತ್ವದಲ್ಲಿ ದುಡಿಯಲು ಸಿದ್ದವಾಗಿದ್ದೇನೆ ಎಂದರು.

ಬಿಜೆಪಿಯ ರಾಜ್ಯಘಟಕ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸದಿದ್ದರೂ ಯಡಿಯೂರಪ್ಪ ನಾನೇ ಶಿವಮೊಗ್ಗ ಕ್ಷೇತ್ರದ ಲೋಕಸಭೆ ಅಭ್ಯರ್ಥಿ ಎಂದು ಘೋಷಿಸಿರುವುದು ಬಿಜೆಪಿ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಮೂಲಗಳು ತಿಳಿಸಿವೆ.

Share this Story:

Follow Webdunia kannada