Webdunia - Bharat's app for daily news and videos

Install App

ನಾಮಪತ್ರ ಸಲ್ಲಿಕೆ ಅಂತಿಮ ದಿನದಂದು ಘಟಾನುಘಟಿಗಳು ಕಣಕ್ಕೆ

Webdunia
ಗುರುವಾರ, 27 ಮಾರ್ಚ್ 2014 (13:51 IST)
PR
ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಬುಧವಾರ ಮಧ್ಯಾಹ್ನ 3ಗಂಟೆವರೆಗೆ ರಾಜ್ಯದ 28 ಕ್ಷೇತ್ರಗಳಿಂದ 225 ಅಭ್ಯರ್ಥಿಗಳಿಂದ 380 ನಾಮಪತ್ರಗಳು ಸಲ್ಲಿಸಿಕೆಯಾಗಿವೆ. ಇದರೊಂದಿಗೆ ಚುನಾವಣಾ ಸಮರಕ್ಕೆ ಧುಮುಕುವವರ ಸಂಖ್ಯೆ ಅಂತಿಮ ಘಟ್ಟಕ್ಕೆ ಬಂದಂತಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರ ಸ್ವಾಮಿ, ಡಿ.ವಿ. ಸದಾನಂದಗೌಡ, ಕಾಂಗ್ರೆಸ್ ಮತ್ತು ಬಿಜೆಪಿಯ ಹಿರಿಯ ನಾಯಕರಾದ ಜನಾರ್ದನ ಪೂಜಾರಿ, ರಮೇಶ್ ಜಿಗಜಿಣಿಗಿ ಸೇರಿದಂತೆ 225 ಹುರಿಯಾಳುಗಳು ಬುಧವಾರ ಲೋಕಸಭಾ ಚುನಾವಣಾ ಕಣಕ್ಕಿಳಿದಿದ್ದಾರೆ.

ಆದರೆ ಮಾರ್ಚ್ 29ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದ್ದು, ಅಂದು ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕೊನೆ ದಿನ ಸಲ್ಲಿಕೆಯಾದ ನಾಮಪತ್ರಗಳೂ ಸೇರಿದಂತೆ ರಾಜ್ಯದಲ್ಲಿ ಈತನಕ 559 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 845 ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂದೂ ಅವರು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments