Select Your Language

Notifications

webdunia
webdunia
webdunia
webdunia

ನೀತಿ ಸಂಹಿತೆ ಉಲ್ಲಂಘನೆ: ಶ್ರೀರಾಮುಲುಗೆ ಜಾಮೀನು

ನೀತಿ ಸಂಹಿತೆ ಉಲ್ಲಂಘನೆ: ಶ್ರೀರಾಮುಲುಗೆ ಜಾಮೀನು
, ಸೋಮವಾರ, 24 ಮಾರ್ಚ್ 2014 (12:31 IST)
PR
PR
ಬಳ್ಳಾರಿ: ಬಿಜೆಪಿಗೆ ಮರುಸೇರ್ಪಡೆಯಾಗಿರುವ ಶ್ರೀರಾಮುಲು ಅವರಿಗೆ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಜಾರಿಯಾಗಿದ್ದ ವಾರಂಟ್‌ಗೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡಲಾಗಿದೆ. 2013 ರ ವಿಧಾನಸಭೆ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಶ್ರೀರಾಮುಲು ವಿರುದ್ಧ ಕೇಸ್ ದಾಖಲಾಗಿತ್ತು. ಬಳ್ಳಾರಿ ಜಿಲ್ಲಾ ನ್ಯಾಯಾಲಯ ಶ್ರೀರಾಮುಲು ಸೇರಿ 8 ಜನರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು. ಕೌಲ್ ಬಜಾರ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಜಾಮೀನು ಸಿಕ್ಕಿರುವುದರಿಂದಾಗಿ ಶ್ರೀರಾಮುಲು ಅವರಿಗೆ ರಿಲೀಫ್ ಉಂಟಾಗಿದೆ. ಕೋರ್ಟ್‌ನಿಂದ ಶ್ರೀರಾಮುಲು ಸೇರಿ ನಾಲ್ವರ ವಿರುದ್ಧ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಶ್ರೀರಾಮುಲು ಬಳ್ಳಾರಿ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರಾದ ಸಂದರ್ಭದಲ್ಲಿ ಅವರಿಗೆ ಜಾಮೀನು ನೀಡಲಾಗಿದೆ.

ಶ್ರೀರಾಮುಲು ಬಿಜೆಪಿಗೆ ಪುನಃ ಸೇರ್ಪಡೆಯಾಗುವ ಸಂದರ್ಭದಲ್ಲಿ ಸುಷ್ಮಾ ಸ್ವರಾಜ್ ತೀವ್ರ ವಿರೋಧ ಸೂಚಿಸಿದ್ದರು. ಆದರೆ ರಾಷ್ಟ್ರೀಯ ನಾಯಕರು ಅದಕ್ಕೆ ಸೊಪ್ಪು ಹಾಕದೇ ಶ್ರೀರಾಮುಲು ಬಿಜೆಪಿ ಸೇರ್ಪೆಡೆಗೆ ಅವಕಾಶ ಕಲ್ಪಿಸಿ ಬಳ್ಳಾರಿ ಟಿಕೆಟ್ ಕೂಡ ನೀಡಲಾಗಿದೆ.

Share this Story:

Follow Webdunia kannada