ನೂತನ ಸಿಎಂ ಡಿವಿ ಸದಾನಂದ ಗೌಡ್ರ ಬಯೋಡಾಟ
ಬೆಂಗಳೂರು , ಬುಧವಾರ, 3 ಆಗಸ್ಟ್ 2011 (17:46 IST)
ರಾಜ್ಯದ 26ನೇ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಬಣದ ಹಸನ್ಮುಖಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮಂಡೆಕೋಲಿನ ದೇವರಗುಂಡ ವೆಂಕಪ್ಪ ಸದಾನಂದ ಗೌಡ ಆಯ್ಕೆಯಾಗಿರುವ ಅವರ ಕಿರು ಪರಿಚಯ ಇಲ್ಲಿದೆ.1953
ಮಾರ್ಚ್ 3ರಂದು ದಕ್ಷಿಣ ಕನ್ನಡ ಜಿಲ್ಲೆ ದೇವರ ಗುಂಡದಲ್ಲಿ (ತಂದೆ ವೆಂಕಪ್ಪ ಮತ್ತು ತಾಯಿ ಕಮಲಾ) ಜನಿಸಿದ ಡಿ.ವಿ. ಸದಾನಂದ ಗೌಡರು, ಹಾಲಿ ಸಂಸದರಾಗಿದ್ದಾರೆ. 1980ರಲ್ಲಿ ವೈವಾಹಿಕ ಜೀವನಕ್ಕೆ ಪ್ರವೇಶ, ಪತ್ನಿ : ಡಾಟಿ ಸದಾನಂದ ಗೌಡ, ಪುತ್ರ ಕಾರ್ತಿಕ್ ಇದ್ದಾನೆ. ವ್ಯಾಸಂಗ: ಬಿಎಸ್ಸಿ ಎಲ್ಎಲ್ಬಿ, ಪುತ್ತೂರು ಸೇಂಟ್ ಫಿಲೋಮಿನಾ ಕಾಲೇಜು, ಕರ್ನಾಟಕ ಮತ್ತು ವೈಕುಂಠ ಬಾಳಿಗ ಕಾನೂನು ಕಾಲೇಜು ಉಡುಪಿ.ಜನಸಂಘದ ಪ್ರಾಥಮಿಕ ಸದಸ್ಯನಾಗಿ ರಾಜಕಾರಣಕ್ಕೆ ಧುಮುಕಿದ್ದ ಸದಾನಂದ ಗೌಡರು ನಂತರ ಬಿಜೆಪಿ ಸುಳ್ಯ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2006ರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗುವ ಮೂಲಕ ಪಕ್ಷ ಸಂಘಟನೆಯಲ್ಲಿ ಹೆಸರು ಮಾಡಿದ್ದರು.ಸದಾನಂದ ಗೌಡ ಜನ ಸಂಘದ ಕಾಲದಿಂದಲೂ ಸಕ್ರಿಯ ರಾಜಕಾರಣದಲ್ಲಿ ಭಾಗಿಯಾಗಿದ್ದರು.ಭಾರತೀಯ ಮಜ್ದೂರ್ ಸಂಘ (ಬಿಎಂಎಸ್)ದಲ್ಲೂ ಕಾರ್ಯನಿರ್ವಹಿಸಿದ್ದ ಗೌಡರು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕ, ಮಾಲೀಕರ ಸಂಘದಲ್ಲೂ ಸೇವೆ ಸಲ್ಲಿಸಿದ್ದರು. ಕ್ರೀಡಾ ಪ್ರೇಮಿ, ಕಲಾಸಕ್ತ ಕ್ರೀಡಾ ಪ್ರೇಮಿಯೂ ಆಗಿರುವ ಸದಾನಂದ ಗೌಡರು ವಿದ್ಯಾರ್ಥಿಯಾಗಿದ್ದಾಗ ಖೋಖೋ ಆಡುತ್ತಿದ್ದು,ಮೈಸೂರು ವಿವಿಯನ್ನು ಪ್ರತಿನಿಧಿಸಿದ್ದರು. ಬ್ಯಾಂಡ್ಮಿಂಟನ್ ಮತ್ತು ಟೆನಿಸ್ ಕೂಡಾ ಆಡುತ್ತಿದ್ದರು. ಕ್ರೀಡೆಯೊಂದಿಗೆ ಕರಾವಳಿಯ ಜಾನಪದ ಕಲೆಯಾದ ಯಕ್ಷಗಾನದ ಬಗ್ಗೆಯೂ ಸದಾನಂದ ಗೌಡರಿಗೆ ವಿಶೇಷ ಆಸಕ್ತಿಯಿದೆ. 1989
ರಲ್ಲಿ ಪ್ರಥಮ ಬಾರಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ19994
ರಲ್ಲಿ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ, 1999ರಲ್ಲಿ ಪುನರಾಯ್ಕೆ.1994
ಮಹಿಳೆಯರ ದೌರ್ಜನ್ಯ ವಿರೋಧಿ ಕಾನೂನು ಕರಡು ರಚನಾ ಸಮಿತಿ ಸದಸ್ಯರಾಗಿ ಆಯ್ಕೆ 1999
ರಾಜ್ಯ ವಿಧಾನ ಸಭೆ ಉಪ ನಾಯಕರಾಗಿ ಆಯ್ಕೆ 2001
ವಿಧಾನಸಭೆಯ ಇಂಧನ, ವಿದ್ಯುತ್ ಸಮಿತಿಯ ಸದಸ್ಯರಾಗಿ ನೇಮಕ 2002
ವಿಧಾನ ಸಭೆಯ ಸಾರ್ವಜನಿಕ ಸಮಿತಿಯ ಸದಸ್ಯ 2003
ರಾಜ್ಯ ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯ 2004
ಮಂಗಳೂರು ಲೋಕಸಭಾ ಸದಸ್ಯರಾಗಿ ಆಯ್ಕೆ 2004
ವಾಣಿಜ್ಯ ಸಮಿತಿ ಸದಸ್ಯರಾಗಿ ಆಯ್ಕೆ 2004
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ 2006
ಸಂಸತ್ನ ವಿಶೇಷ ವಿತ್ತ ವಲಯ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕ2007
ರಲ್ಲಿ ಬಿಜೆಪಿ ಅಧ್ಯಕ್ಷರಾಗಿ ಪುನರಾಯ್ಕೆ 2009-
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆ