Webdunia - Bharat's app for daily news and videos

Install App

ಪುನೀತ್ ಅಂತಿಮ ದರ್ಶನ ಸಂದರ್ಭದಲ್ಲಿ ಶ್ರಮಿಸಿದ ಇಲಾಖೆಗಳ ಕಾರ್ಯಕ್ಕೆ ಮುಖ್ಯಮಂತ್ರಿಗಳ ಮೆಚ್ಚುಗೆ

Webdunia
ಭಾನುವಾರ, 31 ಅಕ್ಟೋಬರ್ 2021 (21:49 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ನಂತರ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಶ್ರಮಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ  ಕೃತಜ್ಞತೆಗಳನ್ನು ಅರ್ಪಿಸಿದರು. 
 
ಸರ್ಕಾರದ ಪೊಲೀಸ್ ಇಲಾಖೆ, ಬಿಬಿಎಂಪಿ, ಕಂದಾಯ ಇಲಾಖೆಗಳು ಮೂರು ದಿನಗಳಿಂದ ಸಾರ್ವಜನಿಕರಿಗೆ ಪುನೀತ ಅವರ ದರ್ಶನದ ವ್ಯವಸ್ಥೆಯನ್ನು ಬಹಳಷ್ಟು ಶ್ರಮ ಮತ್ತು ಶ್ರದ್ಧೆಯಿಂದ ಮಾಡಿವೆ. ಸಣ್ಣ ಪ್ರಮಾದವೂ ಜರುಗದಂತೆ ಎಚ್ಚರ ವಹಿಸಿದಕ್ಕಾಗಿ ಈ ಇಲಾಖೆಗಳು ಅಭಿನಂದನೆಗೆ ಅರ್ಹ. ಈ ಇಲಾಖೆಗಳ ಅಧಿಕಾರಿಗಳ ಕಾರ್ಯ ಪ್ರಶಂಸಾರ್ಹ. ಹೀಗಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. 
 ಲಕ್ಷಾಂತರ ಅಭಿಮಾನಿಗಳು ಆಗಮಿಸಿದರೂ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ  ಸುವ್ಯವಸ್ಥಿತ ದರ್ಶನ ಮತ್ತು ಅಂತ್ಯಕ್ರಿಯೆಗೆ  ಸಹಕರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 
 
ಡಾ: ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಬಹಳಷ್ಟು ಸಹಕಾರ ನೀಡಿದ್ದಾರೆ. ಡಾ: ರಾಜ್ ಕುಮಾರ್ ಅವರ ಸಹೋದರರಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಅವರಿಗೂ  ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು. 
 
ಕನ್ನಡ ನಾಡಿನ ಜನತೆ ಈ ಸಂದರ್ಭದಲ್ಲಿ  ನಾಡಿನ ಸಂಸ್ಕೃತಿಯಂತೆ ನಡೆದುಕೊಂಡಿದ್ದಾರೆ. ಅವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು. 
 
ದೊಡ್ಡ ಮನೆಯ ದೊಡ್ಡ ಗುಣ
 
 :ನಟ ಶಿವರಾಜ್ ಕುಮಾರ್ ಸರ್ಕಾರಕ್ಕೆ ಮತ್ತು ತಮಗೆ ಕೃತಜ್ಞತೆಗಳನ್ನು ಅರ್ಪಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, 
 ಇಂಥ ಘಟನೆಗಳು ಜರುಗಿದಾಗ ಶಾಂತಿ ಸುವ್ಯವಸ್ಥೆ ಕಾಪಾಡುವುದು,  ವ್ಯವಸ್ಥಿತವಾಗಿ ಜನರಿಗೆ ಅನುಕೂಲ ಕಲ್ಪಿಸುವುದು, ಸುಸೂತ್ರವಾಗಿ ಎಲ್ಲವನ್ನೂ ನಡೆಸಿಕೊಡುವುದು  ಸರ್ಕಾರದ ಕರ್ತವ್ಯ . ಆ ಜವಾಬ್ದಾರಿಯನ್ನು ನಿರ್ವಹಿಸಿದ್ದೇವೆ ಎಂದರು. ಸರ್ಕಾರಕ್ಕೆ ಅವರ  ಕೃತಜ್ಞಾಪೂರ್ವಕ ಮಾತುಗಳು   ದೊಡ್ಡ ಮನೆಯ ದೊಡ್ಡ ಗುಣ  ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments