Webdunia - Bharat's app for daily news and videos

Install App

ಪ್ರತಿಭಟನೆಯಿಂದ ರಾಜ್ಯಕ್ಕೆ ಲಾಭವಿಲ್ಲ: ರಾಜ್ಯಪಾಲ ಭಾರದ್ವಾಜ್

Webdunia
ಶನಿವಾರ, 6 ಅಕ್ಟೋಬರ್ 2012 (10:31 IST)
PR
ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಯ ಕಿಚ್ಚು ಹೆಚ್ಚುತ್ತಿರುವ ನಡುವೆಯೇ ಪ್ರತಿಭಟನೆ, ಬಂದ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ.

ಶುಕ್ರವಾರ ಕಾವೇರಿ ವಿವಾದದ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಮಾತನಾಡಿದ ಅವರು, ಮೊದಲು ಕಾನೂನನ್ನು ಗೌರವಿಸಬೇಕು. ಹಿರಿಯ ವಕೀಲ ನಾರಿಮನ್ ಉತ್ತಮವಾಗಿ ವಾದ ಮಂಡಿಸಲಿದ್ದಾರೆ. ಆದರೆ ಪ್ರತಿಭಟನೆಯಿಂದ ಯಾವ ರಾಜ್ಯಕ್ಕೂ ಲಾಭವಿಲ್ಲ ಎಂದು ಹೇಳಿದರು.

ನಾನು ಕಾವೇರಿ ವಿವಾದದ ವಿಚಾರದಲ್ಲಿ ರಾಜ್ಯದ ಪರವಾಗಿ ನಿಲ್ಲುವೆ ಎಂದ ಗವರ್ನರ್, ನಮ್ಮಲ್ಲಿ ಸಂವಿಧಾನವಿದೆ, ಕಾನೂನಿದೆ. ಹಾಗಾಗಿ ನಾವು ಆ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಕಾವೇರಿ ಹಿತರಕ್ಷಣಾ ವೇದಿಕೆ, ಕನ್ನಡ ಪರ ಸಂಘಟನೆ, ರೈತ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿವೆ. ಅಲ್ಲದೇ ಶನಿವಾರ ಕರ್ನಾಟಕ ಬಂದ್‌ಗೂ ಕರೆ ನೀಡಿದ್ದು, ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments