Webdunia - Bharat's app for daily news and videos

Install App

ಪ್ರಭಾವಿಗಳು ನುಂಗಿದ ಅರಣ್ಯ ಭೂಮಿಯನ್ನು ತೆರವುಗೊಳಿಸಿದ ಸರ್ಕಾರ

Webdunia
ಶುಕ್ರವಾರ, 27 ಸೆಪ್ಟಂಬರ್ 2013 (10:37 IST)
PR
PR
ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರೊಬ್ಬರ ಪುತ್ರನು ತನ್ನ ರಾಜಕೀಯ ಪ್ರಭಾವವನ್ನು ಬಳಸಿಕೊಂಡು 35 ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾನೆ. ಆದ್ರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪ್ರಭಾವಿಗಳ ಪ್ರಯತ್ನಕ್ಕೆ ಬ್ರೇಕ್ ಹಾಕಿದ್ದಾರೆ. ಅಷ್ಟೇ ಅಲ್ಲ, 35 ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಇಂದಾವರದಲ್ಲಿನ ಕಾಫಿ ತೋಟಕ್ಕೆ ಹೊಂದಿಕೊಂಡಿರುವ ಅರಣ್ಯ ಇಲಾಖೆಯ 35 ಎಕರೆ ಭೂಮಿಯನ್ನು ಝಕೀರ್ ಉರ್ ರೆಹಮಾನ್ ಒತ್ತುವರಿ ಮಾಡಿಕೊಂಡಿದ್ದರು. ಒತ್ತುವರಿ ಭೂಮಿಯನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ರೆಹ್ಮಾನ್ ಗೆ ಮೂರುಬಾರಿ ನೋಟೀಸ್‌ ಜಾರಿ ಮಾಡಿದ್ದರೂ ಅದಕ್ಕೆ ಕ್ಯಾರೆ ಎನ್ನಲಿಲ್ಲ. ಹೀಗಾಗಿ ಇಂದು ಮುಂಜಾನೆ ಡಿಎಫ್ಓ ರವಿನಾರಾಯಣ್ ನೇತೃತ್ವದಲ್ಲಿ ಅರಣ್ಯ ಇಲಾಖೆಯ ತಂಡ ತೆರವು ಕಾರ್ಯಾಚರಣೆ ಕೈಗೊಂಡಿತು.

35 ಎಕರೆ ವ್ಯಾಪ್ತಿಯಲ್ಲಿ ನೆಟ್ಟಿದ್ದ ಸಾವಿರಾರು ಕಾಫಿ ಸಸಿಗಳನ್ನು ಅರಣ್ಯ ಸಿಬ್ಬಂಧಿಗಳು ಕಡಿದು ಹಾಕಿದರು. ಈ ಮೂಲಕ ಸರ್ಕಾರಿ ಭೂಮಿಯನ್ನು ಯಾರೇ ಒತ್ತುವರಿ ಮಾಡಿಕೊಂಡರೂ, ಕ್ರಮ ಕೈಗೊಳ್ಳದೇ ಬಿಡುವುದಿಲ್ಲ ಎಂಬ ದಿಟ್ಟ ಉತ್ತರವನ್ನು ರವಿ ನಾರಾಯಣ್ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments