Select Your Language

Notifications

webdunia
webdunia
webdunia
webdunia

ಬಂಡೆ ಸಾವಿನ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ಶೆಟ್ಟರ್ ಒತ್ತಾಯ

ಬಂಡೆ ಸಾವಿನ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ಶೆಟ್ಟರ್ ಒತ್ತಾಯ
, ಶುಕ್ರವಾರ, 24 ಜನವರಿ 2014 (11:33 IST)
PR
PR
ಬೆಂಗಳೂರು: ಇಂದು ನಡೆದ ವಿಧಾನಸಭೆ ಕಲಾಪದಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ವಿಚಾರ ಪ್ರಸ್ತಾಪವಾಯಿತು. ಬಂಡೆ ಸಾವು ಅನುಮಾನಗಳನ್ನು ಹುಟ್ಟುಹಾಕಿದ್ದು, ಪೊಲೀಸ್ ಇಲಾಖೆ ನೈತಿಕತೆಯನ್ನು ಕುಗ್ಗಿಸಿದೆ. ಮುನ್ನಾ ಎಂಬ ರೌಡಿಯನ್ನು ಕೊಲ್ಲುವ ಸಂದರ್ಭದಲ್ಲಿ ದಕ್ಷ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಶೂಟ್‌ಔಟ್‌ನಲ್ಲಿ ಮೃತಪಟ್ಟಿದ್ದಾರೆ. ಇದರಿಂದಾಗಿ ಪೊಲೀಸ್ ಹಿರಿಯ ಅಧಿಕಾರಿಗಳ ಕಾರ್ಯನಿರ್ವಹಣೆ, ಗೃಹ ಇಲಾಖೆಯ ಕಾರ್ಯನಿರ್ವಹಣೆ ಬಗ್ಗೆ ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.

ಮಲ್ಲಿಕಾರ್ಜುನ ಬಂಡೆ ಹಿರಿಯ ಅಧಿಕಾರಿಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸ್ತೇವೆ ಎಂದು ಹೇಳಿದ್ದಾರೆ. ಆದರೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಸಿಬಿಐನಿಂದ ತನಿಖೆಯಾಗಬೇಕು ಎಂದು ಶೆಟ್ಟರ್ ಒತ್ತಾಯಿಸಿದರು.

Share this Story:

Follow Webdunia kannada