Webdunia - Bharat's app for daily news and videos

Install App

ಬಗೆಹರಿದ ಮೇಯರ್, ಉಪಮೇಯರ್ ಮೀಸಲಾತಿ ವಿವಾದ

Webdunia
ಗುರುವಾರ, 8 ಆಗಸ್ಟ್ 2013 (13:41 IST)
PR
PR
ಬೆಂಗಳೂರು: ಬಿಬಿಎಂಪಿಯ ಮೇಯರ್ ಮತ್ತು ಉಪಮೇಯರ್ ಹುದ್ದೆಗೆ ಮೀಸಲಾತಿ ನೀಡಲು ಹೈಕೋರ್ಟ್ ಏಕಸದಸ್ಯ ಪೀಠ ಬುಧವಾರ ಆದೇಶ ನೀಡಿದೆ. ಬಿಬಿಎಂಪಿಯಲ್ಲಿ ಮೇಯರ್, ಉಪಮೇಯರ್ ಹುದ್ದೆಗೆ ಮೀಸಲಾತಿ ನೀಡುವುದನ್ನು ಕುರಿತಂತೆ ಪಾಲಿಕೆ ಸದಸ್ಯರಾದ ಲೋಕೇಶ್ ನಾಯಕ್ ಮತ್ತು ಇಂದಿರಾ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಆಂಶಿಕವಾಗಿ ಅಂಗೀಕರಿಸಿದ ನ್ಯಾಯಪೀಠ ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮತ್ತು ಉಪಮೇಯರ್ ಹುದ್ದೆಯನ್ನು ಎಸ್‌ಟಿ ಮಹಿಳೆಗೆ ನಿಗದಿ ಮಾಡಿದೆ. ಮೇಯರ್ ಮತ್ತು ಉಪಮೇಯರ್ ಹುದ್ದೆಗೆ ಏಪ್ರಿಲ್ 27ರಂದು ಚುನಾವಣೆ ನಡೆಯಬೇಕಿತ್ತು.

ಆದರೆ ಒಂದು ಹುದ್ದೆಯನ್ನು ಎಸ್‌ಟಿಗೆ ಮೀಸಲಿಡಬೇಕೆಂದು ಕೋರಿ ಲೋಕೇಶ್, ಇಂದಿರಾ ಅರ್ಜಿ ಸಲ್ಲಿಸಿದ್ದರಿಂದ ಚುನಾವಣೆ ಮುಂದಕ್ಕೆ ಹೋಗಿತ್ತು. ಅರ್ಜಿಯ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಪೀಠ ಉಪಮೇಯರ್ ಹುದ್ದೆಯನ್ನು ಎಸ್‌ಟಿ ಮಹಿಳೆಗೆ ನಿಗದಿ ಮಾಡಿ ಆದೇಶ ಹೊರಡಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments