Webdunia - Bharat's app for daily news and videos

Install App

ಬಸ್ ದುರಂತ: ಡಿಎನ್‌ಎ ಪರೀಕ್ಷೆಯ ನಂತರ ಮೃತರ ಗುರುತು ಪತ್ತೆ

Webdunia
ಶುಕ್ರವಾರ, 15 ನವೆಂಬರ್ 2013 (13:31 IST)
PR
PR
ಹಾವೇರಿ: ಹಾವೇರಿಯಲ್ಲಿ ವೋಲ್ವೋ ಬಸ್‌ಗೆ ಬೆಂಕಿ ಹೊತ್ತಿಕೊಂಡ ದುರಂತದಲ್ಲಿ ಮೃತಪಟ್ಟವರು ಮೊಹಮ್ಮದ್ ಕೈಫ್, ಅಮನ್ ಖಲೀಮ್ ಖಾನ್, ನೌಮನ್ ಖಲೀಮ್ ಖಾನ್, ಶಮೀಮ್ ಬಾನು, ಖಲೀಂ ಅಹಮದ್, ನಯಾಝ್ ಪಾಷಾ, ಹೇಮಂತ್ ಎಂದು ಹೇಳಲಾಗಿದೆ. ಮೃತರ ಸಂಬಂಧಿಕರು ಭಾವಚಿತ್ರಗಳನ್ನು ಹಿಡಿದುಕೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಡಿಎನ್‌ಎ ವರದಿಯ ಬಳಿಕ ಮೃತರ ಗುರುತನ್ನು ಪತ್ತೆಹಚ್ಚಲಾಗುತ್ತದೆ, ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲು ಏಳು ದಿವಸಗಳ ಕಾಲ ಕಾಯಬೇಕೆಂದು ವೈದ್ಯರು ಹೇಳಿದ್ದಾರೆ. ಡಿಎನ್‌ಎ ಪರೀಕ್ಷೆ ನಂತರವೇ ಮೃತದೇಹಗಳನ್ನು ಹಸ್ತಾಂತರ ಮಾಡುವುದಾಗಿ ವೈದ್ಯರು ಹೇಳಿದರು.

ಆದರೆ ಏಳು ದಿನಗಳವರೆಗೆ ಕಾಯುವುದಕ್ಕೆ ಆಗುವುದಿಲ್ಲ ಎಂದು ಮೃತರ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ. ಗಾಯಗೊಂಡವರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರಿಗೆ ಕಾಲಿನಲ್ಲಿ ಗಾಯ, ಇನ್ನೂ ಕೆಲವರಿಗೆ ಸುಟ್ಟ ಗಾಯ, ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಬಸ್ ಕಿಟಕಿಯಿಂದ ಹಾರಿದ್ದರಿಂದ ಕಾಲಿನ ಮೂಳೆ ಮುರಿದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments