Webdunia - Bharat's app for daily news and videos

Install App

ಬಿಜೆಪಿಗೂ ಕರಾವಳಿಗೂ ಅವಿನಾಭಾವ ನಂಟು: ಮಂಗಳೂರು ರೋಡ್‌ ಶೋ ಬಣ್ಣಿಸಿದ ಮೋದಿ

Sampriya
ಸೋಮವಾರ, 15 ಏಪ್ರಿಲ್ 2024 (18:27 IST)
Photo Courtesy X
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆ ಕರ್ನಾಟಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು,  ಮಂಗಳೂರಿನಲ್ಲಿ ನಡೆಸಿದ ರೋಡ್‌  ಸ್ಮರಣೀಯವಾಗಿತ್ತು ಮತ್ತು ಮೈಸೂರಿನಲ್ಲಿ ದೇವೇಗೌಡರ ಜತೆ ವೇದಿಕೆ ಹಂಚಿಕೊಂಡಿದ್ದು  ಸಾರ್ವಜನಿಕ ಸಭೆ 'ಅಭೂತಸಪೂರ್ವ' ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಮಂಗಳೂರಿನ ರೋಡ್‌ ಶೋ ಸ್ಮರಣೀಯವಾಗಿತ್ತು ಎಂದು ಇಂದು ಎಕ್ಸ್‌ನಲ್ಲಿ ಪ್ರಧಾನಿ ಪೋಸ್ಟ್‌ ಮಾಡಿದ್ದಾರೆ. ರವಿವಾರ ಅವರು ನಗರದ ನಾರಾಯಣ ಗುರು ವೃತ್ತದಿಂದ ನವಭಾರತ ವೃತ್ತದ ತನಕ ರೋಡ್‌ ಶೋ ನಡೆಸಿದ್ದರು.

ಮತಬ್ಯಾಂಕ್‌ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ.

ನಾವು ಇಂದು ಬಿಡುಗಡೆ ಮಾಡಿದ ಸಂಕಲ್ಪ ಪತ್ರದಲ್ಲಿ ಮಂಗಳೂರು ಅಭಿವೃದ್ಧಿಗಾಗಿ  ಸಾಕಷ್ಟು ಕುತೂಹಲಕಾರಿ ಅಂಶಗಳಿವೆ. ವಿಶೇಷವಾಗಿ ನಗರಾಭಿವೃದ್ಧಿ ಮೂಲಕ 'ಸುಗಮ ಜೀವನ'ಕ ಲ್ಪಿಸುವುದು ಮತ್ತು ಇತರೆ ಕೆಲಸಗಳನ್ನು ಮಾಡುತ್ತೇವೆ. ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ ಕರಾವಳಿ ಆರ್ಥಿಕತೆಯನ್ನು ಪರಿವರ್ತಿಸುತ್ತದೆ.

ನಮ್ಮ ಮೂರನೇ ಅವಧಿಯಲ್ಲಿ ಭವಿಷ್ಯದ ಶಿಕ್ಷಣಕ್ಕೆ ಸಂಬಂಧಿಸಿದ ಅಂಶಗಳನ್ನು ಸುಧಾರಿಸುವಲ್ಲಿ ಮತ್ತು ಈ ಪ್ರದೇಶದಲ್ಲಿ ಇನ್ನೂ ಉತ್ತಮವಾದ ರೀತಿಯಲ್ಲಿ ಆರೋಗ್ಯ ವಲಯದ ರಕ್ಷಣೆಗೆ ಇನ್ನೂ ಹೆಚ್ಚಿನ ಕೆಲಸ ಮಾಡಬೇಕಾಗಿದೆ. ನಾವು ನೀಲಿ ಕ್ರಾಂತಿಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದು, ಇದರಿಂದ ಮೀನುಗಾರರಿಗೆ ಉತ್ತೇಜನ ಸಿಗಲಿದೆ.  ಇದೇ ರೀತಿ ನಾವು

ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ  ಮಂಗಳೂರು ಮತ್ತು ದಕ್ಷಿಣ ಕನ್ನಡ  ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು.  ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ  ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ  ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ.

'ಕರ್ನಾಟಕದಾದ್ಯಂತ ಬಿಜೆಪಿ ಮತ್ತು ಜೆಡಿಎಸ್‌ಗೆ ಇರುವ ಬೆಂಬಲ ಅತ್ಯುತ್ತಮವಾಗಿದೆ, ಜನರು ಕಾಂಗ್ರೆಸ್‌ನಿಂದ ಬೇಸತ್ತಿದ್ದಾರೆ ಮತ್ತು ನಮ್ಮ ಮೈತ್ರಿಕೂಟ ಗೆಲ್ಲಬೇಕೆಂದು ಬಯಸುತ್ತಿದ್ದಾರೆ, ನಮ್ಮ ಮಾಜಿ ಪ್ರಧಾನಿ ರ್ಯಾಲಿಗೆ ಆಗಮಿಸಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದು ನನಗೆ ಬಹಳ ವಿಶೇಷವಾಗಿದೆ' ಎಂದು ಪ್ರಧಾನಿ ಹೇಳಿದ್ದಾರೆ.

ದೇವೇಗೌಡ ಕೂಡ ಇಂದು ಪೋಸ್ಟ್‌ ಮಾಡಿ, ಮೈಸೂರಿನಲ್ಲಿ ನಡೆದ ಎನ್‌ಡಿಎ ರ್ಯಾಲಿ ಭಾರೀ ಯಶಸ್ವಿಯಾಗಿದೆ ಎಂದಿದ್ದಾರೆ. 'ಪ್ರಧಾನಿಯೊಂದಿಗೆ ಮಾತನಾಡಿ ಖುಷಿಯಾಯಿತು. ರಾಜ್ಯದಲ್ಲಿ ಮೈತ್ರಿಕೂಟಕ್ಕೆ 28 ಸ್ಥಾನಗಳನ್ನು ಗಳಿಸಲು ಹಾಗೂ ದೇಶದಲ್ಲಿ 400 ಸ್ಥಾನಗಳನ್ನು ತಲುಪಲು ಕೊಡುಗೆ ನೀಡಲು ಶ್ರಮಿಸುತ್ತೇವೆ' ಎಂದು ಅವರು ಬರೆದಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ