Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಮತ್ತೊಂದು ಆಘಾತ; ಸಚಿವ ವಿ.ಎಸ್.ಆಚಾರ್ಯ ಇನ್ನಿಲ್ಲ

ಬಿಜೆಪಿಗೆ ಮತ್ತೊಂದು ಆಘಾತ; ಸಚಿವ ವಿ.ಎಸ್.ಆಚಾರ್ಯ ಇನ್ನಿಲ್ಲ
ಬೆಂಗಳೂರು , ಮಂಗಳವಾರ, 14 ಫೆಬ್ರವರಿ 2012 (13:30 IST)
PR
ನಗರದ ಯವನಿಕಾ ಸಭಾಂಗಣದಲ್ಲಿ ನಡೆಯುತ್ತಿದ್ದ ಸಮಾರಂಭದಲ್ಲಿ ಅತಿಥಿಯಾಗಿ ಆಗಮಿಸಿದ್ದ ಉನ್ನತ ಶಿಕ್ಷಣ ಸಚಿವ ವಿ.ಎಸ್.ಆಚಾರ್ಯ ಅವರು ಪ್ರಜ್ಞಾಹೀನರಾಗಿ ಬಿದ್ದ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಆಪ್ತ ಮೂಲಗಳು ತಿಳಿಸಿವೆ.

ಇಲ್ಲಿನ ನೃಪತುಂಗ ರಸ್ತೆಯಲ್ಲಿರುವ ಸೈನ್ಸ್ ಅಂಡ್ ಆರ್ಟ್ಸ್ ಕಾಲೇಜಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಸಚಿವ ಆಚಾರ್ಯ ಅವರು ಅತಿಥಿಯಾಗಿ ಆಗಮಿಸಿದ್ದರು. ಆ ಸಂದರ್ಭದಲ್ಲಿ ದಿಢೀರ್ ಆಗಿ ಪ್ರಜ್ಞಾಹೀನರಾದ ಅವರು ವೇದಿಕೆಯಿಂದ ಆಯತಪ್ಪಿ ಬಿದ್ದಿದ್ದರು. ಕೂಡಲೇ ಸಚಿವರ ಸಿಬ್ಬಂದಿಗಳು ಶುಶ್ರೂಷೆ ನೀಡಿ, ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಆಸ್ಪತ್ರೆಯಲ್ಲಿ ಸಚಿವ ವಿ.ಎಸ್.ಆಚಾರ್ಯ ಅವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿರುವುದಾಗಿ ಬಿಜೆಪಿ ಮೂಲಗಳು ತಿಳಿಸಿದ್ದು, ಆಚಾರ್ಯ ನಿಧನಕ್ಕೆ ಮುಖ್ಯಮಂತ್ರಿ ಸದಾನಂದ ಗೌಡ, ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Share this Story:

Follow Webdunia kannada