Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ಲಕ್ಷ್ಮೀನಾರಾಯಣ್‌ಗೆ ಲಘ ಹೃದಯಾಘಾತ

ಫಲಿತಾಂಶ ತಂದ ಆಘಾತ

Webdunia
ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿ ಹಿನ್ನಡೆ ಸಾಧಿಸಿ, ಜೆಡಿಎಸ್ ಗೆಲುವು ಸಾಧಿಸಿದ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಎಂ.ಡಿ.ಲಕ್ಷ್ಮೀನಾರಾಯಣ ಅವರು ಮತ ಎಣಿಕೆ ಕೇಂದ್ರದಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಘಟನೆ ನಡೆದಿದೆ. ಇಲ್ಲಿ ಜೆಡಿಎಸ್‌ನ ಎಂ.ಟಿ.ಕೃಷ್ಣಪ್ಪ ಗೆಲುವಿನ ನಗು ಬೀರಿದ್ದಾರೆ.

ಮತಎಣಿಕೆ ಬೆಳಿಗ್ಗೆ ಆರಂಭಗೊಂಡಿದ್ದು, ಆರಂಭಿಕವಾಗಿ ಬಿಜೆಪಿಯ ಲಕ್ಷ್ಮೀನಾರಾಯಣ್ ಅವರೇ ಜಯಶಾಲಿ ಎಂದೇ ಹೇಳಲಾಗಿತ್ತು. ಆದರೆ ಅಂತಿಮ ಹಂತದ ಮತಎಣಿಕೆ ಆಗುತ್ತಿದ್ದಂತೆಯೇ ಜೆಡಿಎಸ್‌ನ ಎಂ.ಟಿ.ಕೃಷ್ಣಪ್ಪ ಮುನ್ನಡೆ ಸಾಧಿಸುವ ಮೂಲಕ ಬಿಜೆಪಿ ತೀವ್ರ ನಿರಾಸೆಗೆ ಒಳಗಾಗುವಂತಾಗಿದೆ.

ಇದರೊಂದಿಗೆ ಜಯದ ಹುಮ್ಮಸ್ಸಿನಲ್ಲಿದ್ದ ಬಿಜೆಪಿ ಪಾಳಯದಲ್ಲಿ ಶೋಕದ ವಾತಾವರಣ ಮೂಡಿದೆ. ತುರುವೇಕೆರೆಯ ಸಿ.ಎಸ್.ಪುರ ಜೆಡಿಎಸ್‌‌ನ ಭದ್ರ ಕೋಟೆಯಾಗಿದ್ದು, ಇಲ್ಲಿನ ಮತ ಎಣಿಕೆ ವೇಳೆ ಬಿಜೆಪಿಗೆ ಉಲ್ಟಾ ಹೊಡೆದಿದೆ.

ಲಕ್ಷ್ಮೀನಾರಾಯಣ ಅವರನ್ನು ಇದೀಗ ತುಮಕೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆಯೋಗಕ್ಕೆ ಮನವ ಿ: ತುರವೇಕೆರೆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಬಿಜೆಪಿ ಅಭ್ಯರ್ಥಿ ಲಕ್ಷ್ಮೀನಾರಾಯಣ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದು, ಅಲ್ಲಿಯವರೆಗೆ ಫಲಿತಾಂಶವನ್ನು ತಡೆಹಿಡಿಯಬೇಕು ಎಂದು ಕೋರಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments