Select Your Language

Notifications

webdunia
webdunia
webdunia
webdunia

ಬಿಜೆಪಿ ರಾಜ್ಯದ ಜನರ ನಿರೀಕ್ಷೆ ಹುಸಿ ಮಾಡಿದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ರಾಜ್ಯದ ಜನರ ನಿರೀಕ್ಷೆ ಹುಸಿ ಮಾಡಿದೆ: ಮಲ್ಲಿಕಾರ್ಜುನ ಖರ್ಗೆ
ಬೆಳಗಾವಿ , ಬುಧವಾರ, 29 ಫೆಬ್ರವರಿ 2012 (12:40 IST)
PR
ರಾಜ್ಯದ ಜನತೆ ಬಹು ನಿರೀಕ್ಷೆಯಿಂದ ನೀಡಿದ ಪ್ರೀತಿಯ ಮತ ಬೆಂಬಲವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಇಲ್ಲಿನ ವಿಭಾಗ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ತೆರಳುವ ಮುನ್ನ ಮಾರ್ಗ ಮಧ್ಯದಲ್ಲಿ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಕಾರ್ಯಕರ್ತರು ನೀಡಿದ ಗೌರವ ಸ್ವಾಗತ ಸ್ವೀಕರಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರದ ಒಳಜಗಳ ಹಾಗೂ ಅಧಿಕಾರ ದುರುಪಯೋಗ, ದುರಾಡಳಿತದ ವಿರುದ್ಧ ರಾಜ್ಯದ ಜನತೆ ರೋಸಿಹೋಗಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ತಮ್ಮಲ್ಲಿನ ವೈಯಕ್ತಿಕ ಪ್ರತಿಷ್ಠೆ, ವೈಮನಸ್ಸುಗಳನ್ನು ಬದಿಗಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಪ್ರೀತಿ ವಿಶ್ವಾಸ ಗಳಿಸಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಒಗ್ಗಟ್ಟಾಗಿ ಶ್ರಮಿಸುವಂತೆ ಕರೆ ನೀಡಿದರು.

Share this Story:

Follow Webdunia kannada