Select Your Language

Notifications

webdunia
webdunia
webdunia
webdunia

ಬಿಜೆಪಿ ಶಾಸಕರ ಸೇರ್ಪಡೆಯಿಂದ ಕಾಂಗ್ರೆಸ್‌ಗೇನು ಲಾಭವಿಲ್ಲ:ಕುಮ್ಮಿ

ಬಿಜೆಪಿ ಶಾಸಕರ ಸೇರ್ಪಡೆಯಿಂದ ಕಾಂಗ್ರೆಸ್‌ಗೇನು ಲಾಭವಿಲ್ಲ:ಕುಮ್ಮಿ
ಕೋಲಾರ , ಗುರುವಾರ, 28 ಫೆಬ್ರವರಿ 2013 (15:35 IST)
PR
PR
ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ಶಾಸಕರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಈ ಶಾಸಕರುಗಳ ಪಕ್ಷಾಂತರದಿಂದ ಯಾರಿಗೂ ಲಾಭವಿಲ್ಲ ಎಂದು ಹೇಳಿದ್ದಾರೆ.

ಕೋಲಾರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದುವರೆಗೂ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿದ್ದ ಈ ಶಾಸಕರುಗಳು ಈಗ ಕಾಂಗ್ರೆಸ್ ಸೇರಲು ಹೊರಟಿದ್ದಾರೆ. ಇವರುಗಳ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಲಾಭವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಇಂದು ಮಂಡಿಸಿರುವ ಬಜೆಟ್ ಕುರಿತು ಮಾತನಾಡಿದ ಕುಮಾರಸ್ವಾಮಿ, ಈ ಬಜೆಟ್ ನಿರಾಶದಾಯಕವಾಗಿದ್ದು, ದೇಶದ ಅಭಿವೃದ್ದಿಗೆ ಮಾರಕವಾಗಿದೆ ಎಂದು ತಿಳಿಸಿದರು.

ಯಾವುದೇ ಮುಂದಾಲೋಚನೆ ಇಲ್ಲದ ಈ ಬಜೆಟ್‌ನಿಂದ ಜನತೆ ಹೆಚ್ಚಿನದೇನನ್ನೂ ನಿರೀಕ್ಷಿಸಲಾಗದು ಎಂದು ಕುಮಾರಸ್ವಾಮಿ ತಿಳಿಸಿದರು.

Share this Story:

Follow Webdunia kannada