Webdunia - Bharat's app for daily news and videos

Install App

ಬಿಬಿಎಂಪಿ ಅಧಿಕಾರಿಗೆ ಗುತ್ತಿಗೆದಾರನ ಬೆದರಿಕೆ ಆರೋಪ

Webdunia
ಗುರುವಾರ, 3 ಅಕ್ಟೋಬರ್ 2013 (14:22 IST)
PR
PR
ಬೆಂಗಳೂರು: ಗುತ್ತಿಗೆದಾರನೊಬ್ಬ ಬಿಬಿಎಂಪಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಬಿಬಿಎಂಪಿ ಅಪರ ಆಯುಕ್ತ ಡಿ.ಕಿರಣ್ ಅವರ ಕಚೇರಿಗೆ ನುಗ್ಗಿ ಗುತ್ತಿಗೆದಾರ ಕೃಷ್ಣಮೂರ್ತಿ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ. ಬಿಬಿಎಂಪಿ ಆಯುಕ್ತ ಲಕ್ಷ್ಮಿನಾರಾಯಣ್‌ಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಬಿಬಿಎಂಪಿ ಮೇಯರ್ ಸತ್ಯನಾರಾಯಣ್ ಈ ವಿಷಯದ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಲು ಹೇಳುವುದಾಗಿ ತಿಳಿಸಿದ್ದಾರೆ. ಇಂದು 12 ಗಂಟೆ ಸುಮಾರಿಗೆ ಕಾಮಗಾರಿಯ ಬಿಲ್‌ಗೆ ಸಂಬಂಧಿಸಿದ ವಿಚಾರವಾಗಿ ಕಿರಣ್‌ಗೆ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ.

ಕೃಷ್ಣಮೂರ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರು ಎಂದು ಹೇಳಲಾಗುತ್ತಿದೆ. ಈ ಕುರಿತು ಕೃಷ್ಣಮೂರ್ತಿ ಅವರನ್ನು ಪ್ರಶ್ನಿಸಿದಾಗ, ತಮಗೆ 32 ಲಕ್ಷ ರೂ. ಹಣ ಬರಬೇಕಿತ್ತು. ಗುತ್ತಿಗೆದಾರರ ಕಾಮಗಾರಿಗೆ ಸರ್ಕಾರದಿಂದ ಕೋಟ್ಯಂತರ ಹಣ ಬಿಡುಗಡೆಯಾಗಿದ್ದರೂ ನನಗೆ ಹಣ ಮಂಜೂರು ಮಾಡಿಲ್ಲ ಎಂದು ಕೃಷ್ಣಮೂರ್ತಿ ಆಪಾದಿಸಿದ್ದಾರೆ. ಬೇರೆಯವರಿಗೆಲ್ಲ ಕೊಟ್ಟಿದ್ದೀರಿಲ್ಲಾ, ನಮಗೆ ಯಾಕೆ ಕೊಡಲ್ಲ ಎಂದು ಕೇಳಿದ್ದು ನಿಜ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments