Webdunia - Bharat's app for daily news and videos

Install App

ಯಡಿಯೂರಪ್ಪ ನಡೆಯಿಂದ ಬಿಜೆಪಿ ಕಾರ್ಯಕರ್ತರಿಗೆ ಅಸಮಾಧಾನ : ಕೆ.ಎಸ್. ಈಶ್ವರಪ್ಪ

Webdunia
ಬುಧವಾರ, 29 ಜೂನ್ 2016 (13:09 IST)
ಪದಾಧಿಕಾರಿಗಳ ನೇಮಕದಲ್ಲಿ ತಾರತಮ್ಯವಾಗಿರುವುದರಿಂದ ಕಾರ್ಯಕರ್ತರಲ್ಲಿ ಅಸಮಾಧಾನವಾಗಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 
 
ನಿನ್ನೆ ಹೋಟೆಲ್‌ನಲ್ಲಿ ನಡೆದ ಅತೃಪ್ತ ಮಾಜಿ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದ ಈಶ್ವರಪ್ಪ, ಪದಾಧಿಕಾರಿಗಳ ನೇಮಕ ಕುರಿತಂತೆ ಪ್ರತಿಯೊಬ್ಬರ ನೋವುಗಳನ್ನು ಆಲಿಸಿದ್ದೇನೆ. ಅವರ ಅಭಿಪ್ರಾಯಗಳನ್ನು ರಾಜ್ಯದ ಉಸ್ತುವಾರಿ ಹೊತ್ತಿರುವ ಮುರಳಿಧರ್ ಅವರಿಗೆ ರವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಹಿರಿಯ ಮುಖಂಡರು ಪ್ರತಿಯೊಂದು ಜಿಲ್ಲೆಗೆ ತೆರಳಿ ಅಲ್ಲಿನ ಮುಖಂಡರ ಸಲಹೆಗಳನ್ನು ಆಲಿಸಿದ ನಂತರ ಜಿಲ್ಲಾಧ್ಯಕ್ಷರ ನೇಮಕ ಮಾಡಿದ್ದಲ್ಲಿ ಅಪಸ್ವರಕ್ಕೆ ಕಾರಣವಾಗುತ್ತಿರಲಿಲ್ಲ. ಬೆಂಗಳೂರಲ್ಲಿ ಕುಳಿತ 30 ಜಿಲ್ಲೆಗಳ ಜಿಲ್ಲಾಧ್ಯಕ್ಷರು ಸೇರಿದಂತೆ ಇತರ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಕೆ.ಎಸ್.ಈಶ್ವರಪ್ಪ ರಾಜ್ಯದ ಉಸ್ತುವಾರಿ ಹೊತ್ತಿರುವ ಮುರಳಿಧರ್ ಅವರಿಗೆ ಪದಾಧಿಕಾರಿಗಳ ಬಗ್ಗೆ ಅಭಿಪ್ರಾಯಗಳನ್ನು ರವಾನಿಸಿರುವುದು ಪಕ್ಷದ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ಅವರಿಂದ ತಿಳಿದುಕೊಂಡ ನಂತರ ಯಡಿಯೂರಪ್ಪ ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments