Webdunia - Bharat's app for daily news and videos

Install App

ಯಡಿಯೂರಪ್ಪ ನಡೆಯಿಂದ ಬಿಜೆಪಿ ಕಾರ್ಯಕರ್ತರಿಗೆ ಅಸಮಾಧಾನ : ಕೆ.ಎಸ್. ಈಶ್ವರಪ್ಪ

Webdunia
ಬುಧವಾರ, 29 ಜೂನ್ 2016 (13:09 IST)
ಪದಾಧಿಕಾರಿಗಳ ನೇಮಕದಲ್ಲಿ ತಾರತಮ್ಯವಾಗಿರುವುದರಿಂದ ಕಾರ್ಯಕರ್ತರಲ್ಲಿ ಅಸಮಾಧಾನವಾಗಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 
 
ನಿನ್ನೆ ಹೋಟೆಲ್‌ನಲ್ಲಿ ನಡೆದ ಅತೃಪ್ತ ಮಾಜಿ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದ ಈಶ್ವರಪ್ಪ, ಪದಾಧಿಕಾರಿಗಳ ನೇಮಕ ಕುರಿತಂತೆ ಪ್ರತಿಯೊಬ್ಬರ ನೋವುಗಳನ್ನು ಆಲಿಸಿದ್ದೇನೆ. ಅವರ ಅಭಿಪ್ರಾಯಗಳನ್ನು ರಾಜ್ಯದ ಉಸ್ತುವಾರಿ ಹೊತ್ತಿರುವ ಮುರಳಿಧರ್ ಅವರಿಗೆ ರವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಹಿರಿಯ ಮುಖಂಡರು ಪ್ರತಿಯೊಂದು ಜಿಲ್ಲೆಗೆ ತೆರಳಿ ಅಲ್ಲಿನ ಮುಖಂಡರ ಸಲಹೆಗಳನ್ನು ಆಲಿಸಿದ ನಂತರ ಜಿಲ್ಲಾಧ್ಯಕ್ಷರ ನೇಮಕ ಮಾಡಿದ್ದಲ್ಲಿ ಅಪಸ್ವರಕ್ಕೆ ಕಾರಣವಾಗುತ್ತಿರಲಿಲ್ಲ. ಬೆಂಗಳೂರಲ್ಲಿ ಕುಳಿತ 30 ಜಿಲ್ಲೆಗಳ ಜಿಲ್ಲಾಧ್ಯಕ್ಷರು ಸೇರಿದಂತೆ ಇತರ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಕೆ.ಎಸ್.ಈಶ್ವರಪ್ಪ ರಾಜ್ಯದ ಉಸ್ತುವಾರಿ ಹೊತ್ತಿರುವ ಮುರಳಿಧರ್ ಅವರಿಗೆ ಪದಾಧಿಕಾರಿಗಳ ಬಗ್ಗೆ ಅಭಿಪ್ರಾಯಗಳನ್ನು ರವಾನಿಸಿರುವುದು ಪಕ್ಷದ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ಅವರಿಂದ ತಿಳಿದುಕೊಂಡ ನಂತರ ಯಡಿಯೂರಪ್ಪ ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments