Select Your Language

Notifications

webdunia
webdunia
webdunia
webdunia

ಬೆಂಗಳೂರು ಉತ್ತರಕ್ಕೆ ನಾನೇ ಅಭ್ಯರ್ಥಿ: ಡಿಬಿಸಿ, ಅಶೋಕ್, ಡಿವಿಎಸ್‌ಗೆ ಸೆಡ್ಡುಹೊಡೆದ ಕರಂದ್ಲಾಜೆ

ಬೆಂಗಳೂರು ಉತ್ತರಕ್ಕೆ ನಾನೇ ಅಭ್ಯರ್ಥಿ: ಡಿಬಿಸಿ, ಅಶೋಕ್, ಡಿವಿಎಸ್‌ಗೆ ಸೆಡ್ಡುಹೊಡೆದ ಕರಂದ್ಲಾಜೆ
ಬೆಂಗಳೂರು , ಸೋಮವಾರ, 10 ಫೆಬ್ರವರಿ 2014 (12:45 IST)
PR
ನಾನೂ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿ ಟಿಕೆಟ್ ಆಕಾಂಕ್ಷಿಗಳ ಕೆಂಗೆಣ್ಣಿಗೆ ಗುರಿಯಾಗಿದ್ದಾರೆ.

ಮಾಜಿ ಗೃಹ ಸಚಿವ ಆರ್, ಅಶೋಕ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಕೂಡಾ ಬೆಂಗಳೂರು ಉತ್ತರ ಕ್ಷೇತ್ರದ ಆಕಾಂಕ್ಷಿಗಳಾಗಿದ್ದು, ಇದೀಗ ಶೋಭಾ ಕರಂದ್ಲಾಜೆ ಕೂಡಾ ಆಕಾಂಕ್ಷಿಗಳ ಪಟ್ಟಿಗೆ ಸೇರಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಲೋಕಸಭೆಗೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್‌ನ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ಕರಂದ್ಲಾಜೆ ತಿಳಿಸಿದ್ದಾರೆ.

ಮೈಸೂರು , ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಗಳಿಂದ ಸ್ಪರ್ಧಿಸುತ್ತೇನೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ನಾನು ಸ್ಪರ್ಧಿಸಿದರೆ ಕೇವಲ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರ ಮಾತ್ರ ಎಂದು ಗುಡುಗಿದ್ದಾರೆ.

ಹಾಲಿ ಸಂಸದ ಡಿ.ಬಿ.ಚಂದ್ರೇಗೌಡರಿಗೆ ಕೊಕ್ ನೀಡಿ ತಮಗೆ ಟಿಕೆಟ್ ನೀಡುವಂತೆ ಬಿಜೆಪಿ ಮುಖಂಡರು ಒತ್ತಾಯಿಸುತ್ತಿರುವುದು ಹೈಕಮಾಂಡ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Share this Story:

Follow Webdunia kannada