Webdunia - Bharat's app for daily news and videos

Install App

ಬೆಂಗಳೂರು ಉತ್ತರಕ್ಕೆ ನಾನೇ ಅಭ್ಯರ್ಥಿ: ಡಿಬಿಸಿ, ಅಶೋಕ್, ಡಿವಿಎಸ್‌ಗೆ ಸೆಡ್ಡುಹೊಡೆದ ಕರಂದ್ಲಾಜೆ

Webdunia
ಸೋಮವಾರ, 10 ಫೆಬ್ರವರಿ 2014 (12:45 IST)
PR
ನಾನೂ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿ ಟಿಕೆಟ್ ಆಕಾಂಕ್ಷಿಗಳ ಕೆಂಗೆಣ್ಣಿಗೆ ಗುರಿಯಾಗಿದ್ದಾರೆ.

ಮಾಜಿ ಗೃಹ ಸಚಿವ ಆರ್, ಅಶೋಕ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಕೂಡಾ ಬೆಂಗಳೂರು ಉತ್ತರ ಕ್ಷೇತ್ರದ ಆಕಾಂಕ್ಷಿಗಳಾಗಿದ್ದು, ಇದೀಗ ಶೋಭಾ ಕರಂದ್ಲಾಜೆ ಕೂಡಾ ಆಕಾಂಕ್ಷಿಗಳ ಪಟ್ಟಿಗೆ ಸೇರಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಲೋಕಸಭೆಗೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್‌ನ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ಕರಂದ್ಲಾಜೆ ತಿಳಿಸಿದ್ದಾರೆ.

ಮೈಸೂರು , ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಗಳಿಂದ ಸ್ಪರ್ಧಿಸುತ್ತೇನೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ನಾನು ಸ್ಪರ್ಧಿಸಿದರೆ ಕೇವಲ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರ ಮಾತ್ರ ಎಂದು ಗುಡುಗಿದ್ದಾರೆ.

ಹಾಲಿ ಸಂಸದ ಡಿ.ಬಿ.ಚಂದ್ರೇಗೌಡರಿಗೆ ಕೊಕ್ ನೀಡಿ ತಮಗೆ ಟಿಕೆಟ್ ನೀಡುವಂತೆ ಬಿಜೆಪಿ ಮುಖಂಡರು ಒತ್ತಾಯಿಸುತ್ತಿರುವುದು ಹೈಕಮಾಂಡ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments