Webdunia - Bharat's app for daily news and videos

Install App

ಭಯೋತ್ಪಾದನೆಗೆ ಯುಪಿಎ ಕಾರಣ: ಮೋದಿ

Webdunia
ಬುಧವಾರ, 7 ಮೇ 2008 (10:09 IST)
ಭಯೋತ್ಪಾದನೆ ಬಗ್ಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಮೃಧು ಧೋರಣೆಯಿಂದಾಗಿ ಇಂದು ರಾಷ್ಟ್ರದೆಲ್ಲೇಡೆ ಭಯೋತ್ಪಾದಕರ ಹಾವಳಿ ಹೆಚ್ಚಾಗುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಪೋಟಾ ಕಾಯ್ದೆಯನ್ನು ಯುಪಿಎ ಸರ್ಕಾರ ರದ್ದುಗೊಳಿಸಿರುವುದರಿಂದ ಭಯೋತ್ಪಾದಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ಗುಜರಾತ್ ಮಾದರಿ ಅಭಿವೃದ್ದಿಯನ್ನು ಟೀಕಿಸುತ್ತಿರುವ ಕಾಂಗ್ರೆಸ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಗುಜರಾತ್‌ನಲ್ಲಿ ರೈತರಿಗೆ ದಿನದ 24ಗಂಟೆಯೂ ತ್ರೀಫೇಸ್ ವಿದ್ಯುತ್ ನೀಡಲಾಗುತ್ತಿದೆ. ಇಡೀ ರಾಜ್ಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಸುಸೂತ್ರಗೊಳಿಸಲಾಗಿದೆ. ಇಂತಹ ಸರ್ವಾಂಗೀಣ ಪ್ರಗತಿ ಎನ್ನುವುದೇ ಗುಜರಾತ್ ಮಾದರಿಯಾಗಿದೆ. ಇದು ಕಾಂಗ್ರೆಸ್ಸಿಗರಿಗೆ ಬೇಡವೇ ಎಂದು ಪ್ರಶ್ನಿಸಿದರು.

ಗುಜರಾತ್‌ನಲ್ಲಿನ ಅಭಿವೃದ್ದಿ ಇಡೀ ದೇಶಕ್ಕೆ ಮಾದರಿಯಾಗಿದೆ. ಆದರೆ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಅಂತಹ ಅಭಿವೃದ್ದಿ ಬೇಡವಾಗಿದೆ. ಅಭಿವೃದ್ದಿಯೇ ಮೂಲಮಂತ್ರವನ್ನಾಗಿಸಿಕೊಂಡಿರುವ ಬಿಜೆಪಿಗೆ ಮತನೀಡಿಬೇಕೆಂದು ಮತದಾರರಲ್ಲಿ ಅವರು ಮನವಿ ಮಾಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments