Select Your Language

Notifications

webdunia
webdunia
webdunia
webdunia

ಭಯೋತ್ಪಾದನೆ ಹೆಸರಲ್ಲಿ ರಾಜಕೀಯ ಬೇಡ: ಆರ್.ವಿ.

ಭಯೋತ್ಪಾದನೆ ಹೆಸರಲ್ಲಿ ರಾಜಕೀಯ ಬೇಡ: ಆರ್.ವಿ.
ಬೆಂಗಳೂರು , ಗುರುವಾರ, 27 ನವೆಂಬರ್ 2008 (18:28 IST)
ದೇಶದಲ್ಲಿ ಸಂಭವಿಸುತ್ತಿರುವ ಭಯೋತ್ಪಾದನಾ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳದೇ ಒಕ್ಕೊರಲಿನಿಂದ ಇಂತಹ ದುಷ್ಕೃತ್ಯಗಳನ್ನು ಖಂಡಿಸಬೇಕು ಎಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಗುರುವಾರ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಮುಖಂಡರು ಇಂತಹ ಘಟನೆಗಳನ್ನು ಖಂಡಿಸದಿದ್ದರೆ ಭಯೋತ್ಪಾದಕರಿಗೆ ಉತ್ತೇಜನ ನೀಡಿದಂತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಅಥವಾ ಯಾವುದೇ ರಾಜ್ಯಗಳಲ್ಲಿ ಇಂತಹ ಭಯೋತ್ಪಾದಕ ಘಟನೆಗಳು ನಡೆದರೆ ಎಲ್ಲಾ ರಾಜ್ಯ ಸರಕಾರಗಲು ಬೆಂಬಲವಾಗಿ ನಿಲ್ಲಬೇಕು ಎಂದರು.

ಭಯೋತ್ಪಾದಕರು ಈ ದೇಶದ ನೀಚರು, ದೇಶದ್ರೋಹಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ ದೇಶಪಾಂಡೆಯವರು, ಭಯೋತ್ಪಾದನಾ ನಿಗ್ರಹಕ್ಕೆ ದೇಶದ ಜನರು ಜಾಗೃತರಾಗಬೇಕು ಎಂದು ಹೇಳಿದರು.

Share this Story:

Follow Webdunia kannada