Webdunia - Bharat's app for daily news and videos

Install App

ಮನೆ ಕಟ್ಟಿಸಿ ಕೊಡುತ್ತೇವೆ:ಸರ್ಕಾರಕ್ಕೆ ರೆಡ್ಡಿ ಸವಾಲ್

Webdunia
ಮಂಗಳವಾರ, 27 ಅಕ್ಟೋಬರ್ 2009 (19:06 IST)
ನೆರೆಯಲ್ಲಿ ನೊಂದವರಿಗೆ 500ಕೋಟಿ ರೂಪಾಯಿ ವೆಚ್ಚದಲ್ಲಿ 50ಸಾವಿರ ಮನೆಗಳನ್ನು ನಿರ್ಮಿಸಿಕೊಡುವ ಬೃಹತ್ ಯೋಜನೆಗೆ ಬುಧವಾರ ಚಾಲನೆ ನೀಡಲಾಗುವುದು ಎಂದು ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಬರಲಿ, ಬಾರದಿರಲಿ ಕಂದಾಯ ಸಚಿವ ಕರುಣಾಕರ ರೆಡ್ಡಿ ನೇತೃತ್ವದಲ್ಲಿ ಈ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಮುಖ್ಯಮಂತ್ರಿಗಳನ್ನು ದೂರವಿಟ್ಟು ಸರ್ಕಾರಕ್ಕೆ ಪರ್ಯಾಯವಾಗಿ ಮನೆ ನಿರ್ಮಿಸುತ್ತಿರುವ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕರುಣಾಕರ ರೆಡ್ಡಿ ಅವರು ಸರ್ಕಾರದ ಭಾಗವಾಗಿದ್ದು, ಅವರ ನೇತೃತ್ವದಲ್ಲಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು ಎಂದರು.

ನಿಮ್ಮಿಂದ ಸರ್ಕಾರಕ್ಕೆ ಬೆದರಿಕೆ ಇದೆಯಲ್ಲಾ?ಎಂದು ಕೇಳಿದ ಪ್ರಶ್ನೆಗೆ ಹಾಗೇಕೆ ನೀವು ಅಂದುಕೊಳ್ಳುವಿರಿ?ಎಂದು ಮರುಪ್ರಶ್ನೆ ಹಾಕಿ ಜಾರಿಕೊಂಡರು.

ಚಿದು,ದೇವೇಗೌಡ,ಕಲಾಂಗೆ ಆಹ್ವಾನ: ನೆರೆಯಲ್ಲಿ ನೊಂದವರಿಗೆ ಮನೆ ನಿರ್ಮಿಸಿಕೊಡುವ ಯೋಜನೆಗಳ ಚಾಲನೆಯ ಸಮಾರಂಭಕ್ಕೆ ಮಾಜಿ ರಾಷ್ಟ್ರಪತಿ ಕಲಾಂ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ನವೆಂಬರ್ 2ರಂದು ರಾಯಚೂರಿನಲ್ಲಿ ನಡೆಯುವ ಸಮಾರಂಭಕ್ಕೆ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.

ಒಂದೆರೆಡು ದಿನಗಳಲ್ಲಿ ದೇವೇಗೌಡ ಅವರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿ ಕೈಗೊಳ್ಳುವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗುವುದು ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments