Webdunia - Bharat's app for daily news and videos

Install App

ಮನೆ ಖಾಲಿ ಮಾಡಿದ್ರು ಗೃಹಜ್ಯೋತಿ ಬಳಸಬಹುದು ಹೇಗೆ ಗೊತ್ತಾ..?

geetha
ಗುರುವಾರ, 8 ಫೆಬ್ರವರಿ 2024 (19:09 IST)
ಬೆಂಗಳೂರು-ರಾಜ್ಯ ಸರ್ಕಾರವು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ 'ಡಿಲಿಂಕಿಂಗ್' ಆಯ್ಕೆಗೆ ಈಗ ಅವಕಾಶ ನೀಡಿದೆ.ಯೋಜನೆಯಿಂದ ಆಧಾರ್ ಸಂಖ್ಯೆಯನ್ನು ಡಿಲಿಂಕ್ ಮಾಡಲು ಮತ್ತು ಹೊಸ ಮನೆಗಳಿಗೆ ಗೃಹ ಜ್ಯೋತಿಯ ಪ್ರಯೋಜನವನ್ನು ಪಡೆಯಲು ಯಾವುದೇ ಆಯ್ಕೆಯಿಲ್ಲದ ಕಾರಣ ಕರ್ನಾಟಕದಾದ್ಯಂತ ಬಾಡಿಗೆದಾರರು ಒಂದು ಮನೆಗೆ ಅವರೇ ಎಂಬಂತೆ ಫಿಕ್ಸ್ ಆದಂತೆ ಆಗಿತ್ತು.
 
ಬೇರೆಯವರು ಮನೆಯಲ್ಲಿದ್ದರೂ ಇನ್ನೊಬ್ಬರು ಬಾಡಿಗೆದಾರರು ಎಂಬಂತೆ ಸೂಚಿಸುತ್ತಿತ್ತು. ಸಮಸ್ಯೆ ಮತ್ತು ಗೊಂದಲದ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜನವರಿ 18, 2024 ರ ಆವೃತ್ತಿಯಲ್ಲಿ 'ನಿಮ್ಮ ಮನೆಯನ್ನು ಬದಲಾಯಿಸುವುದೇ? ಗೃಹ ಜ್ಯೋತಿ ಮರು-ನೋಂದಣಿ ಸಂಕಟ' ಎಂದು ವರದಿಯನ್ನು ಮಾಡಿತ್ತು. ಹಾಗೆಯೇ ಹಲವಾರು ಮಾಧ್ಯಮಗಳು ವರದಿಯನ್ನು ಮಾಡಿತ್ತು.ಉಚಿತ ವಿದ್ಯುತ್ ಯೋಜನೆ ಗೃಹ ಜ್ಯೋತಿ ನಿಯಮ ಬದಲಾಯಿಸಿದ ಕರ್ನಾಟಕ ಸರ್ಕಾರಈಗ ಮಾಧ್ಯಮಗಳ ವರದಿಯನ್ನು ಗಮನಿಸಿರುವ ಬೆಸ್ಕಾಂ ಬಾಡಿಗೆದಾರರು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಮ್‌ಗಳು) ನ್ಯಾಯವ್ಯಾಪ್ತಿಯ ವಿಭಾಗೀಯ ಕಚೇರಿಗಳಿಗೆ ಭೇಟಿ ನೀಡುವಂತೆ ಸೂಚಿಸಿದೆ.

ಅವರ ಗೃಹ ಜ್ಯೋತಿ ಸಂಪರ್ಕಗಳಿಂದ ತಮ್ಮ ಆಧಾರ್ ಸಂಖ್ಯೆಯನ್ನು ತಾವೇ ಡಿಲಿಂಕ್ ಮಾಡುವ ಆಯ್ಕೆಯನ್ನು ನೀಡಿದೆ. ಆದರೆ ಈ ಕ್ರಮವು ವಿಭಾಗೀಯ ಕಚೇರಿಗಳಲ್ಲಿ ಅವ್ಯವಸ್ಥೆಗೆ ಮತ್ತಷ್ಟು ದಾರಿ ಮಾಮಾಡಲಾಗುತ್ತಿದೆ.ಆನ್‌ಲೈನ್ ವಿಧಾನಗಳ ಮೂಲಕ ಗ್ರಾಹಕರನ್ನು ಡಿಲಿಂಕ್ ಮಾಡಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಇಲಾಖೆ ಎಲ್ಲಾ ಎಸ್ಕಾಮ್‌ಗಳನ್ನು ತಿಳಿಸಿದೆ.ಈ ಯೋಜನೆಯಡಿಯಲ್ಲಿ ಪ್ರತಿ ಮನೆಗೆ ತಿಂಗಳಿಗೆ ಗರಿಷ್ಠವಾಗಿ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ಅನ್ನು ನೀಡಲಾಗುತ್ತದೆ. ಸರಾಸರಿ ಲೆಕ್ಕಾಚಾರದಲ್ಲಿ ನಾವು ನೋಡಿದಾಗ ಮಾಸಿಕವಾಗಿ 500ರಿಂದ 1200 ರೂಪಾಯಿ ವಿದ್ಯುತ್ ಬಿಲ್ ಬರುವವರಿಗೆ ಇದು ಲಾಭವಾಗಲಿದೆ. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್, ಮಂಗಳೂರುಒನ್, ವಿದ್ಯುತ್ ಇಲಾಖೆ ಕಚೇರಿಗಳಲ್ಲಿ ಕೂಡ ಅರ್ಜಿಯನ್ನು ನೋಂದಣಿ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments