Webdunia - Bharat's app for daily news and videos

Install App

ಮುಗ್ದ ಭಾವದ ಮೂಲದ ಪದ್ಮಶ್ರೀ ಸ್ವೀಕಾರ

Webdunia
ಶುಕ್ರವಾರ, 24 ಮಾರ್ಚ್ 2023 (18:55 IST)
ಬುಡಕಟ್ಟು ಸಮುದಾಯದ ಜೀವನವನ್ನು ಉನ್ನತೀಕರಿಸಲು ನೀಡಿದ ಕೊಡುಗೆಗಾಗಿ ಸಮಾಜ ಸೇವಕಿ 70 ವರ್ಷದ ಹಿರ್ಬಾಯಿ ಇಬ್ರಾಹಿಂ ಲೋಬಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು.ಗುಜರಾತ್​ನ ಸಿದ್ದಿ ಬುಡಕಟ್ಟು ಸಮುದಾಯದ ಮಹಿಳೆಯರ ಸಬಲೀಕರಣಕ್ಕಾಗಿ ಸಾಮಾಜಿಕ ಸುಧಾರಣೆಗಳು ಮತ್ತು ಉಪಕ್ರಮಗಳನ್ನು ತರಲು ಹೆಸರು ವಾಸಿಯಾದ ಲೋಬಿ, ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ತಮ್ಮ ಹಾವಭಾವದ ಮೂಲಕ ಜನರ ಹೃದಯವನ್ನು ಗೆದ್ದರು. ವಿಡಿಯೋದಲ್ಲಿ, ಪ್ರಶಸ್ತಿ ಪಡೆಯಲು ನಡೆದುಕೊಂಡು ಹೋಗುತ್ತಿರುವಾಗ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಹಲವಾರು ಕೇಂದ್ರ ಸಚಿವರು ಕುಳಿತಿದ್ದ ಮೊದಲ ಸಾಲಿನ ಬಳಿ ಸ್ವಲ್ಪ ಸಮಯ ನಿಂತು ಧೈರ್ಯದಿಂದ ಮಾತನಾಡಿದರು. ಪ್ರಧಾನಿ ಮೋದಿಯವರ ಬುಡಕಟ್ಟು ಜನಾಂಗದವರ ಉದಾತ್ತ ಕೆಲಸಕ್ಕಾಗಿ ಶ್ಲಾಘಿಸಿದರು. ಅಪರೂಪದ ಆಶೀರ್ವಾದದ ಅಭಿವ್ಯಕ್ತಿಯಲ್ಲಿ, ಪ್ರೀತಿ ಮತ್ತು ಕೃತಜ್ಞತೆಯನ್ನು ತೋರಿಸಿದರು. ನನ್ನ ಪ್ರೀ ತಿಯ ಸಹೋದರ ನರೇಂದ್ರ, ನೀವು ನನ್ನ ಚೀಲವನ್ನು ಅನ್ನು ಸಂತೋಷದಿಂದ ತುಂಬಿದ್ದೀರಿ ಎಂದು ಹೇಳಿದರು. ಸಭಾಂಗಣದಲ್ಲಿ ಆಕೆಯ ಭಾವೋದ್ವೇಗಕ್ಕೆ ಚಪ್ಪಾಳೆ ತಟ್ಟಿದರು. ತಮ್ಮ ಆಶೀರ್ವಾದವನ್ನು ತಿಳಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭುಜದ ಮೇಲೆ ತನ್ನ ಎರಡೂ ಕೈಗಳನ್ನು ಇರಿಸುವ ಮೂಲಕ ಪ್ರೀತಿ ವ್ಯಕ್ತಪಡಿಸಿದರು. ಮುರ್ಮು ಬುಡಕಟ್ಟು ಸಮುದಾಯದಿಂದ ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿರುವುದರಿಂದ ಲೋಬಿ ಅವರು ರಾಷ್ಟ್ರಪತಿಗಳ ಬಗ್ಗೆ ವಿಶೇಷ ಪ್ರೀತಿಯನ್ನು ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments