Select Your Language

Notifications

webdunia
webdunia
webdunia
webdunia

ಮೇ 8 ರ ನಂತರ ಮತ್ತೆ ತಾವೇ ಮುಖ್ಯಮಂತ್ರಿ: ಯಡ್ಡಿ ವಿಶ್ವಾಸ

ಮೇ 8 ರ ನಂತರ ಮತ್ತೆ ತಾವೇ ಮುಖ್ಯಮಂತ್ರಿ: ಯಡ್ಡಿ ವಿಶ್ವಾಸ
ಸಿರುಗುಪ್ಪ , ಮಂಗಳವಾರ, 30 ಏಪ್ರಿಲ್ 2013 (13:39 IST)
PR
PR
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿಗೆ ಬಹುಮತ ಲಭಿಸುವುದು ಖಚಿತವಾಗಿದ್ದು, ಫಲಿತಾಂಶ ದಿನವಾದ ಮೇ 8 ರಂದು ಬಿಜೆಪಿಯ ಬಣ್ಣ ಬಯಲಾಗಲಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ, ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮೇ 8 ರ ನಂತರ ಮತ್ತೆ ನಾನೇ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಆತ್ಮವಿಶ್ವಾಸದಿಂದ ನುಡಿದಿದ್ದಾರೆ.

ಕೆಜೆಪಿ ಅಭ್ಯರ್ಥಿ ಪರ ಮತಯಾಚಿಸಲು ಸಿರುಗುಪ್ಪಕ್ಕೆ ಆಗಮಿಸಿದ ಸಂದರ್ಭ ಹೆಲಿಪ್ಯಾಡ್‌ನ‌ಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ 30-40 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರಲ್ಲದೆ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಕರೆದುಕೊಂಡು ಪ್ರಚಾರ ಮಾಡಿಸಿದರೂ ಬಿಜೆಪಿ ಪರಿಸ್ಥಿತಿ ಸುಧಾರಿಸುವುದಿಲ್ಲ ಎಂದು ವ್ಯಂಗ್ಯವಾಡಿದರು.

ತಮ್ಮ ನೇತೃತ್ವದ ಕೆಜೆಪಿಯನ್ನು ಕಾಂಗ್ರೆಸ್ ಪಕ್ಷದ ಬಿ ಟೀಮ್ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಬೀದಿಯಲ್ಲಿದ್ದ ಶೆಟ್ಟರ್ ಅವರನ್ನು ಕರೆದುಕೊಂಡು ಬಂದು ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಯಾರು ತಮ್ಮನ್ನು ಸಿಎಂ ಮಾಡಿದವರು ಎಂಬುದನ್ನು ಮರೆತು ಶೆಟ್ಟರ್ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

Share this Story:

Follow Webdunia kannada