Webdunia - Bharat's app for daily news and videos

Install App

ಮೇ 8 ರ ನಂತರ ಮತ್ತೆ ತಾವೇ ಮುಖ್ಯಮಂತ್ರಿ: ಯಡ್ಡಿ ವಿಶ್ವಾಸ

Webdunia
ಮಂಗಳವಾರ, 30 ಏಪ್ರಿಲ್ 2013 (13:39 IST)
PR
PR
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿಗೆ ಬಹುಮತ ಲಭಿಸುವುದು ಖಚಿತವಾಗಿದ್ದು, ಫಲಿತಾಂಶ ದಿನವಾದ ಮೇ 8 ರಂದು ಬಿಜೆಪಿಯ ಬಣ್ಣ ಬಯಲಾಗಲಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ, ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮೇ 8 ರ ನಂತರ ಮತ್ತೆ ನಾನೇ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಆತ್ಮವಿಶ್ವಾಸದಿಂದ ನುಡಿದಿದ್ದಾರೆ.

ಕೆಜೆಪಿ ಅಭ್ಯರ್ಥಿ ಪರ ಮತಯಾಚಿಸಲು ಸಿರುಗುಪ್ಪಕ್ಕೆ ಆಗಮಿಸಿದ ಸಂದರ್ಭ ಹೆಲಿಪ್ಯಾಡ್‌ನ‌ಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ 30-40 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರಲ್ಲದೆ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಕರೆದುಕೊಂಡು ಪ್ರಚಾರ ಮಾಡಿಸಿದರೂ ಬಿಜೆಪಿ ಪರಿಸ್ಥಿತಿ ಸುಧಾರಿಸುವುದಿಲ್ಲ ಎಂದು ವ್ಯಂಗ್ಯವಾಡಿದರು.

ತಮ್ಮ ನೇತೃತ್ವದ ಕೆಜೆಪಿಯನ್ನು ಕಾಂಗ್ರೆಸ್ ಪಕ್ಷದ ಬಿ ಟೀಮ್ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಬೀದಿಯಲ್ಲಿದ್ದ ಶೆಟ್ಟರ್ ಅವರನ್ನು ಕರೆದುಕೊಂಡು ಬಂದು ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಯಾರು ತಮ್ಮನ್ನು ಸಿಎಂ ಮಾಡಿದವರು ಎಂಬುದನ್ನು ಮರೆತು ಶೆಟ್ಟರ್ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments